22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

ಬೆಳ್ತಂಗಡಿ: ಕ್ರೈಸ್ತರ ಅತ್ಯಂತ ಪವಿತ್ರ ಹಬ್ಬ ವಾದ ಈಸ್ಟರ್ ಗೆ ಸಿದ್ಧತೆಯಾಗಿ ಆಚರಿಸುವ ವ್ರತಕಾಲ ಇಂದು ನಲವತ್ತನೇ ದಿನವನ್ನು ಪ್ರವೇಶಿಸಿದೆ. ಇದರ ಪ್ರಯುಕ್ತ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಶಿಲುಬೆಯ ಹಾದಿಯ ಪುಣ್ಯ ಕ್ಷೇತ್ರ ಗಂಡಿಬಾಗಿಲಿನ ದೇವಗಿರಿ ಶಿಲುಬೆಯ ಹಾದಿ ಯಶಸ್ವಿಯಾಗಿ ಸಂಪನ್ನಗೊಂಡಿತು.

ಧರ್ಮ ಪ್ರಾಂತ್ಯದ ವಿವಿದ ಧರ್ಮ ಕೇಂದ್ರಗಳಿಂದ ಮುಂಜಾನೆ ಯಿಂದಲೇ ದೇವಗಿರಿಯ ಸಂತ ಜುದರ ದೇವಾಲಯದ ಅಂಗಳದಲ್ಲಿ ಸೇರಿ ಬಲಿಪೂಜೆಯನ್ನರ್ಪಿಸಿ ಕೈಗಳಲ್ಲಿ ಸಣ್ಣ ಶಿಲುಭೆಯ ಹರಕೆಯನ್ನೋತ್ತು ದೇವಗಿರಿ ಬೆಟ್ಟವನ್ನು ಲೋಕ ರಕ್ಷಕ ಯೇಸುವಿನ
ಯಾತನೆಯನ್ನು ಸ್ಮರಿಸಿ ಶಿಲುಭೆಯ ಹಾದಿಯ ಹಾಡು ಮತ್ತು ಪ್ರಾರ್ಥನೆ ಯೊಂದಿಗೆ ಬೆಟ್ಟ ವನ್ನೇರಿದರು. ನಿನ್ನೆಯ ಹನ್ನೆರಡು ದಿನಗಳು ಕಠಿಣ ವ್ರತ ಆಚರಣೆಗೆ ಕ್ರೈಸ್ತರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಇಷ್ಟಾರ್ಥ ಈಡೇರಿಕೆ, ಹಾಗೂ ಪಾಪ ವಿಮೋಚನೆ ಗಾಗಿ ಕ್ರೈಸ್ತರು ಇದರಲ್ಲಿ ಭಾಗವಹಿಸಿ ಪ್ರಾರ್ಥಿಸುತ್ತಾರೆ. ಪ್ರತಿ ವರ್ಷವೂ ವಿವಿಧ ಸ್ಥಳಗಳಿಂದ ಧರ್ಮ ಗುರುಗಳೂ, ಭಗೀನಿಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

Related posts

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!