April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಪ್ರವೀಣ್ ಮದ್ದಡ್ಕ ಎಂಬಾತನು ತನ್ನ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ಜನಾಂಗ ಮತ್ತು ಪಂಗಡಗಳ ನಡುವೆ ದ್ವೇಷ ಬಿತ್ತುವ ಹಾಗೂ ಸಮಾಜದ ಸೌಹಾರ್ದತೆಗೆ ಭಂಗವನ್ನುಂಟು ಮಾಡುವಂತಹ ಪೋಸ್ಟ್ ಹಾಕಿರುವುದರಿಂದ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆಯ ಮೂಲಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ನೀಡಿದರು.

ಮಾ.21 ರಂದು ರಾತ್ರಿ ಫೇಸ್‌ಬುಕ್ ಪೇಜ್‌ಗೆ ಪ್ರವೀಣ್ ಮದ್ದಡ್ಕ ಎಂಬವರ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ‘ ನಿಯತ್ತಿಲ್ಲದ ಜನ ಅಂದ್ರೆ ಈ ನೀಲಿ ಶಾಲಿನ ಜನಗಳು, ಅವುಗಳಿಗೆ ಬಿಟ್ಟಿ ಎಣ್ಣೆ ದುಡ್ಡು ಕೊಟ್ರೆ ಸ್ವಂತ ತಾಯಿಯನ್ನೇ ತಲೆಹಿಡಿತವೇ! ಇವರ ಜನರ ನೆರಳು ಮುಟ್ಟದ ಸಮಯದಲ್ಲಿ ದೇವಸ್ಥಾನ ಒಳಗೆ ಪ್ರವೇಶ ಕೊಟ್ಟು ಮೊಟ್ಟ ಮೊದಲ ದೇವಸ್ಥಾನ ಧರ್ಮಸ್ಥಳ ಆಗಿನ ಕಾಲದಲ್ಲಿ ಖಾವಂದರು ಇದಕ್ಕಾಗಿ ಬಹಳ ಟೀಕೆಗೆ ಒಳಪಟ್ಟಿದ್ದಾರೆ. ಇವತ್ತು ಈ ನಮಕ್ ಹರಮ್ಗಳು ಅವರದ್ದೇ ವಿರೋಧಿಗಳ ಜೊತೆಗೆ ಕೈ ಜೋಡಿಸಿದ್ದಾರೆ, ಎಂಬಿತ್ಯಾದಿ ಕೀಳುಮಟ್ಟದ ಪದ ಬಳಸಿ ಫೇಸ್‌ಬುಕ್ ನಲ್ಲಿ ಹರಿಯ ಬಿಟ್ಟಿರುವುದರಿಂದ ಜಾತಿ ಜನಾಂಗ-ಪಂಗಡಗಳ ನಡುವೆ ದ್ವೇಷ ಬಿತ್ತುವ ಹಾಗೂ ಸಮಾಜದ ಸೌಹಾರ್ದತೆಗೆ ಭಂಗವನ್ನುಂಟು ಮಾಡುವಂತಹ ಪೋಸ್ಟ್ ಹಾಕಿರುವವುದರ ವಿರುದ್ಧ ಕೇಸು ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮೈಸೂರು ವಿಭಾಗೀಯ ಸಂಚಾಲಕ ಬಿ. ಕೆ ವಸಂತ್, ತಾಲೂಕು ಪ್ರಧಾನ ಸಂಚಾಲಕ ರಮೇಶ್ ಆರ್, ತಾಲೂಕು ಸಂಘಟನಾ ಸಂಚಾಲಕ ಎಸ್ ಪ್ರಭಾಕರ, ರಾಜ್ಯ ಸಂಘಟನಾ ಸಂಚಾಲಕರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya
error: Content is protected !!