25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಪ್ರವೀಣ್ ಮದ್ದಡ್ಕ ಎಂಬಾತನು ತನ್ನ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ಜನಾಂಗ ಮತ್ತು ಪಂಗಡಗಳ ನಡುವೆ ದ್ವೇಷ ಬಿತ್ತುವ ಹಾಗೂ ಸಮಾಜದ ಸೌಹಾರ್ದತೆಗೆ ಭಂಗವನ್ನುಂಟು ಮಾಡುವಂತಹ ಪೋಸ್ಟ್ ಹಾಕಿರುವುದರಿಂದ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆಯ ಮೂಲಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ನೀಡಿದರು.

ಮಾ.21 ರಂದು ರಾತ್ರಿ ಫೇಸ್‌ಬುಕ್ ಪೇಜ್‌ಗೆ ಪ್ರವೀಣ್ ಮದ್ದಡ್ಕ ಎಂಬವರ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ‘ ನಿಯತ್ತಿಲ್ಲದ ಜನ ಅಂದ್ರೆ ಈ ನೀಲಿ ಶಾಲಿನ ಜನಗಳು, ಅವುಗಳಿಗೆ ಬಿಟ್ಟಿ ಎಣ್ಣೆ ದುಡ್ಡು ಕೊಟ್ರೆ ಸ್ವಂತ ತಾಯಿಯನ್ನೇ ತಲೆಹಿಡಿತವೇ! ಇವರ ಜನರ ನೆರಳು ಮುಟ್ಟದ ಸಮಯದಲ್ಲಿ ದೇವಸ್ಥಾನ ಒಳಗೆ ಪ್ರವೇಶ ಕೊಟ್ಟು ಮೊಟ್ಟ ಮೊದಲ ದೇವಸ್ಥಾನ ಧರ್ಮಸ್ಥಳ ಆಗಿನ ಕಾಲದಲ್ಲಿ ಖಾವಂದರು ಇದಕ್ಕಾಗಿ ಬಹಳ ಟೀಕೆಗೆ ಒಳಪಟ್ಟಿದ್ದಾರೆ. ಇವತ್ತು ಈ ನಮಕ್ ಹರಮ್ಗಳು ಅವರದ್ದೇ ವಿರೋಧಿಗಳ ಜೊತೆಗೆ ಕೈ ಜೋಡಿಸಿದ್ದಾರೆ, ಎಂಬಿತ್ಯಾದಿ ಕೀಳುಮಟ್ಟದ ಪದ ಬಳಸಿ ಫೇಸ್‌ಬುಕ್ ನಲ್ಲಿ ಹರಿಯ ಬಿಟ್ಟಿರುವುದರಿಂದ ಜಾತಿ ಜನಾಂಗ-ಪಂಗಡಗಳ ನಡುವೆ ದ್ವೇಷ ಬಿತ್ತುವ ಹಾಗೂ ಸಮಾಜದ ಸೌಹಾರ್ದತೆಗೆ ಭಂಗವನ್ನುಂಟು ಮಾಡುವಂತಹ ಪೋಸ್ಟ್ ಹಾಕಿರುವವುದರ ವಿರುದ್ಧ ಕೇಸು ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮೈಸೂರು ವಿಭಾಗೀಯ ಸಂಚಾಲಕ ಬಿ. ಕೆ ವಸಂತ್, ತಾಲೂಕು ಪ್ರಧಾನ ಸಂಚಾಲಕ ರಮೇಶ್ ಆರ್, ತಾಲೂಕು ಸಂಘಟನಾ ಸಂಚಾಲಕ ಎಸ್ ಪ್ರಭಾಕರ, ರಾಜ್ಯ ಸಂಘಟನಾ ಸಂಚಾಲಕರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya
error: Content is protected !!