24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಬೆಳ್ತಂಗಡಿ: ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದು ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಕೋರಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು 5 ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಸ್ವಾಮಿ

12 ದಿನಗಳ ಹಿಂದೆ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್ (45), ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ (56), ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ತುಮಕೂರಿಗೆ ತೆರಳಿದ್ದರು. ಈ ಮೂವರು ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ‘ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ, ಕಡಿಮೆ ಬೆಲೆಗೆ ಚಿನ್ನವನ್ನು ನೀಡುತ್ತೇವೆ’ ಎಂದು ಸುಳ್ಳು ಹೇಳಿ ಆರೋಪಿಗಳು ಈ ಮೂವರನ್ನು ಹಣ ದೋಚುವ ಪ್ಲಾಂಟನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಮೂವರ ಮೃತದೇಹಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ.

Related posts

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya
error: Content is protected !!