ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಮಾ.22 ರಂದು ಶುಭಾರಂಭಗೊಂಡಿದೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ರಾಮಕೃಷ್ಣ ಭಟ್, ಉಪವ್ಯವಸ್ಥಾಪಕ ಸತೀಶ್ ರಾವ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ನೂತನ ಕಟ್ಟಡ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಕೆ. ವಿ ಭಟ್ ಹಳ್ಳಿಂಗೇರಿ, ಅಧ್ಯಕ್ಷ ರಾಮಣ್ಣ ಗೌಡ ಕೆಚೋಡಿ, ಉಪಾಧ್ಯಕ್ಷ ಜಯಂತ ಗೌಡ ಅಡೀಲು, ಕಟ್ಟಡ ನಿರ್ಮಿಸಿದ ಇಂಜಿನಿಯರ್ ಪ್ರಶಾಂತ್ ಪಿ.ವಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷೆ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್ ಬಿ ಜಯರಾಮ್ ರೈ ಬಳಜ್ಜ, ನಿರ್ದೇಶಕ ನಾರಾಯಣ ಪ್ರಕಾಶ್ ಸಂಘಕ್ಕೆ ಭೇಟಿ ನೀಡಿದರು.

Leave a Comment

error: Content is protected !!