July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ ಇದರ ಆಶ್ರಯದಲ್ಲಿ ಡಾ ಬಿ ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ ಸರಣಿಯ ಮಾಲಿಕೆ -1 ಜಾಗತಿಕ ತಂತ್ರಜ್ಞಾನ ಹಾಗೂ ಭಾರತೀಯರ ಕೌಶಲ್ಯ ಕ್ಷಮತೆ ಎಂಬ ವಿಷಯದ ಬಗ್ಗೆ ಇಂಗ್ಲೆಂಡ್ ನ ಏರ್ಬಸ್ ವಿಮಾನ ಕಂಪನಿಯ ತಂತ್ರಜ್ಞ ಯೋಗಿಂದ್ರ ಮರವಂತೆ ಇವರಿಂದ ನಡೆಯಿತು.

ಕಾರ್ಯಕ್ರಮದ ಮೊದಲಿಗೆ ಈ ವಿಶೇಷ ಉಪನ್ಯಾಸ ಸರಣಿಯನ್ನು ದಿವಂಗತ ಡಾ ಬಿ ಯಶೋವರ್ಮ ರವರ ಧರ್ಮಪತ್ನಿ ಶ್ರೀಮತಿ ಸೋನಿಯಾ ಯಶೋವರ್ಮ ಅವರಿಂದ ಉದ್ಘಾಟನೆಗೊಂಡಿತು. ಈ ವೇಳೆ ಮಾತಾಡಿದ ಅವರು ದಿವಂಗತ ಡಾ ಬಿ ಯಶೋವರ್ಮ ರವರ ಸಾರ್ಥಕ ಮತ್ತು ಶಿಸ್ತುಬದ್ಧ ಬದುಕು ಎಲ್ಲರಿಗೂ ಪ್ರೇರಣೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ನಂತರ ಉಪನ್ಯಾಸ ಕಾರ್ಯಕ್ರಮ ನಡೆಸಿಕೊಟ್ಟ ಖ್ಯಾತ ಲೇಖಕ ಅಂಕಣಕಾರ ವಿಮಾನ ಕಂಪನಿಯ ತಂತ್ರಜ್ಞ ಯೋಗಿಂದ್ರ ಮರವಂತೆ ಅವರು ಜಗತ್ತಿನ ತಂತ್ರಜ್ಞಾನ ಮತ್ತು ಅದಕ್ಕೆ ಭಾರತೀಯ ವಿಜ್ಞಾನಿಗಳ ಕೊಡುಗೆ ಹಾಗೂ ಹೊಸ ಹೊಸ ತಂತ್ರಜ್ಞಾನಗಳ ಬಗ್ಗೆಗೆ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಕಾರ್ಯಕ್ರಮವನ್ನು ಕಾಲೇಜಿನ ಮ್ಯಾನೇಜರ್ ಚಂದ್ರನಾಥ್ ಜೈನ್ ಮತ್ತು ಮಿಥುನ್ ಜೈನ್ ವ್ಯವಸ್ಥಿತವಾಗಿ ಆಯೋಜನೆ ಮಾಡಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮ, ನಿಖಿತ್ ಧನ್ಯವಾದವಿತ್ತರು. ಸಂಪತ್ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya
error: Content is protected !!