25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

ಬೆಳ್ತಂಗಡಿ: ಕ್ರೈಸ್ತರ ಅತ್ಯಂತ ಪವಿತ್ರ ಹಬ್ಬ ವಾದ ಈಸ್ಟರ್ ಗೆ ಸಿದ್ಧತೆಯಾಗಿ ಆಚರಿಸುವ ವ್ರತಕಾಲ ಇಂದು ನಲವತ್ತನೇ ದಿನವನ್ನು ಪ್ರವೇಶಿಸಿದೆ. ಇದರ ಪ್ರಯುಕ್ತ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಶಿಲುಬೆಯ ಹಾದಿಯ ಪುಣ್ಯ ಕ್ಷೇತ್ರ ಗಂಡಿಬಾಗಿಲಿನ ದೇವಗಿರಿ ಶಿಲುಬೆಯ ಹಾದಿ ಯಶಸ್ವಿಯಾಗಿ ಸಂಪನ್ನಗೊಂಡಿತು.

ಧರ್ಮ ಪ್ರಾಂತ್ಯದ ವಿವಿದ ಧರ್ಮ ಕೇಂದ್ರಗಳಿಂದ ಮುಂಜಾನೆ ಯಿಂದಲೇ ದೇವಗಿರಿಯ ಸಂತ ಜುದರ ದೇವಾಲಯದ ಅಂಗಳದಲ್ಲಿ ಸೇರಿ ಬಲಿಪೂಜೆಯನ್ನರ್ಪಿಸಿ ಕೈಗಳಲ್ಲಿ ಸಣ್ಣ ಶಿಲುಭೆಯ ಹರಕೆಯನ್ನೋತ್ತು ದೇವಗಿರಿ ಬೆಟ್ಟವನ್ನು ಲೋಕ ರಕ್ಷಕ ಯೇಸುವಿನ
ಯಾತನೆಯನ್ನು ಸ್ಮರಿಸಿ ಶಿಲುಭೆಯ ಹಾದಿಯ ಹಾಡು ಮತ್ತು ಪ್ರಾರ್ಥನೆ ಯೊಂದಿಗೆ ಬೆಟ್ಟ ವನ್ನೇರಿದರು. ನಿನ್ನೆಯ ಹನ್ನೆರಡು ದಿನಗಳು ಕಠಿಣ ವ್ರತ ಆಚರಣೆಗೆ ಕ್ರೈಸ್ತರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಇಷ್ಟಾರ್ಥ ಈಡೇರಿಕೆ, ಹಾಗೂ ಪಾಪ ವಿಮೋಚನೆ ಗಾಗಿ ಕ್ರೈಸ್ತರು ಇದರಲ್ಲಿ ಭಾಗವಹಿಸಿ ಪ್ರಾರ್ಥಿಸುತ್ತಾರೆ. ಪ್ರತಿ ವರ್ಷವೂ ವಿವಿಧ ಸ್ಥಳಗಳಿಂದ ಧರ್ಮ ಗುರುಗಳೂ, ಭಗೀನಿಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

Related posts

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya
error: Content is protected !!