September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಪ್ರವೀಣ್ ಮದ್ದಡ್ಕ ಎಂಬಾತನು ತನ್ನ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ಜನಾಂಗ ಮತ್ತು ಪಂಗಡಗಳ ನಡುವೆ ದ್ವೇಷ ಬಿತ್ತುವ ಹಾಗೂ ಸಮಾಜದ ಸೌಹಾರ್ದತೆಗೆ ಭಂಗವನ್ನುಂಟು ಮಾಡುವಂತಹ ಪೋಸ್ಟ್ ಹಾಕಿರುವುದರಿಂದ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆಯ ಮೂಲಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ನೀಡಿದರು.

ಮಾ.21 ರಂದು ರಾತ್ರಿ ಫೇಸ್‌ಬುಕ್ ಪೇಜ್‌ಗೆ ಪ್ರವೀಣ್ ಮದ್ದಡ್ಕ ಎಂಬವರ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ‘ ನಿಯತ್ತಿಲ್ಲದ ಜನ ಅಂದ್ರೆ ಈ ನೀಲಿ ಶಾಲಿನ ಜನಗಳು, ಅವುಗಳಿಗೆ ಬಿಟ್ಟಿ ಎಣ್ಣೆ ದುಡ್ಡು ಕೊಟ್ರೆ ಸ್ವಂತ ತಾಯಿಯನ್ನೇ ತಲೆಹಿಡಿತವೇ! ಇವರ ಜನರ ನೆರಳು ಮುಟ್ಟದ ಸಮಯದಲ್ಲಿ ದೇವಸ್ಥಾನ ಒಳಗೆ ಪ್ರವೇಶ ಕೊಟ್ಟು ಮೊಟ್ಟ ಮೊದಲ ದೇವಸ್ಥಾನ ಧರ್ಮಸ್ಥಳ ಆಗಿನ ಕಾಲದಲ್ಲಿ ಖಾವಂದರು ಇದಕ್ಕಾಗಿ ಬಹಳ ಟೀಕೆಗೆ ಒಳಪಟ್ಟಿದ್ದಾರೆ. ಇವತ್ತು ಈ ನಮಕ್ ಹರಮ್ಗಳು ಅವರದ್ದೇ ವಿರೋಧಿಗಳ ಜೊತೆಗೆ ಕೈ ಜೋಡಿಸಿದ್ದಾರೆ, ಎಂಬಿತ್ಯಾದಿ ಕೀಳುಮಟ್ಟದ ಪದ ಬಳಸಿ ಫೇಸ್‌ಬುಕ್ ನಲ್ಲಿ ಹರಿಯ ಬಿಟ್ಟಿರುವುದರಿಂದ ಜಾತಿ ಜನಾಂಗ-ಪಂಗಡಗಳ ನಡುವೆ ದ್ವೇಷ ಬಿತ್ತುವ ಹಾಗೂ ಸಮಾಜದ ಸೌಹಾರ್ದತೆಗೆ ಭಂಗವನ್ನುಂಟು ಮಾಡುವಂತಹ ಪೋಸ್ಟ್ ಹಾಕಿರುವವುದರ ವಿರುದ್ಧ ಕೇಸು ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮೈಸೂರು ವಿಭಾಗೀಯ ಸಂಚಾಲಕ ಬಿ. ಕೆ ವಸಂತ್, ತಾಲೂಕು ಪ್ರಧಾನ ಸಂಚಾಲಕ ರಮೇಶ್ ಆರ್, ತಾಲೂಕು ಸಂಘಟನಾ ಸಂಚಾಲಕ ಎಸ್ ಪ್ರಭಾಕರ, ರಾಜ್ಯ ಸಂಘಟನಾ ಸಂಚಾಲಕರು ಉಪಸ್ಥಿತರಿದ್ದರು.

Related posts

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya
error: Content is protected !!