22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಬೆಳ್ತಂಗಡಿ: ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದು ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಕೋರಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು 5 ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಸ್ವಾಮಿ

12 ದಿನಗಳ ಹಿಂದೆ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್ (45), ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ (56), ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ತುಮಕೂರಿಗೆ ತೆರಳಿದ್ದರು. ಈ ಮೂವರು ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ‘ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ, ಕಡಿಮೆ ಬೆಲೆಗೆ ಚಿನ್ನವನ್ನು ನೀಡುತ್ತೇವೆ’ ಎಂದು ಸುಳ್ಳು ಹೇಳಿ ಆರೋಪಿಗಳು ಈ ಮೂವರನ್ನು ಹಣ ದೋಚುವ ಪ್ಲಾಂಟನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಮೂವರ ಮೃತದೇಹಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ.

Related posts

ರಕ್ತೇಶ್ವರಿ ಪದವು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ವೇಣೂರು: ತುಂಗಮ್ಮ ಪೂಜಾರಿ ನಿಧನ

Suddi Udaya

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya
error: Content is protected !!