25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

ಉಜಿರೆ: ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಭೇಟಿ ನೀಡಿ ಸರಕಾರಿ ಶಾಲೆಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸೇವೆ ಶ್ಲಾಘನೀಯ. ಇದು ನಿಜವಾದ ಸಮಾಜಸೇವೆ ಎಂದರು.

ಕಳೆದ ಒಂದೂವರೆ ತಿಂಗಳ ಹಿಂದೆ ಶಾಲೆಯನ್ನು ಜೀರ್ಣೋದ್ಧಾರಗೊಳಿಸುವ ನಿಟ್ಟಿನಲ್ಲಿ ಬದುಕು ಕಟ್ಟೋಣ ಬನ್ನಿ ತಂಡ ಹಾಗೂ ಇತರ ಸಂಘ ಸಂಸ್ಥೆಗಳು ಸೇರಿ ಶಾಲೆಯಲ್ಲಿ ಶ್ರಮದಾನದ ಮೂಲಕ ಕೆಲಸ ಪ್ರಾರಂಭಿಸಲಾಗಿತ್ತು. ಕೆಲಸ ಪ್ರಾರಂಭಿಸಿ ಇಂದಿಗೆ 50 ದಿನಗಳು ಮುಗಿಯುವಷ್ಟರಲ್ಲಿ ಹೆಚ್ಚಿನ ಕೆಲಸಗಳು ನಡೆದಿದೆ.

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಎಸ್.ಡಿ.ಎಂ ಸ್ಪೋರ್ಟ್ಸ್ ವಿದ್ಯಾರ್ಥಿಗಳು, ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರು ಶಾಲೆಯಲ್ಲಿ ಶ್ರಮದಾನ ನಡೆಸಿದರು.

ಈ ಸಂದರ್ಭದಲ್ಲಿ ಪೂರನ್ ವರ್ಮ,ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ,ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ,ಕಾರ್ಯದರ್ಶಿ ವಿದ್ಯಾ,ಎಸ್.ಡಿ.ಎಂ ದೈಹಿಕ ಶಿಕ್ಷಣ ಶಿಕ್ಷಕ ರಮೇಶ್, ಶಾಲಾಭಿವೃದ್ದಿ ಸಮಿತಿ ಪದಾಧಿಕಾರಿಗಳು,ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya
error: Content is protected !!