July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

ಬೆಳ್ತಂಗಡಿ; ಮೂಲತಃ ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ‌ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯ ನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾ.24 ರಂದು ನಡೆದಿದೆ.

ಉಜಿರೆಯ ಪ್ರಸಿದ್ಧ ರಾಜ್ ಹೇರ್ ಡ್ರೆಸ್ಸಸ್ ಸಂಸ್ಥೆಯ ಮಾಲಿಕರಾಗಿರುವ ದೇವರಾಜ ಭಂಡಾರಿ ಮತ್ತು ರತ್ನಾವತಿ ದಂಪತಿ ಪುತ್ರನಾಗಿರುವ ಅವರು ತಂದೆಯ ಜೊತೆಗೇ ದೀರ್ಘ ಕಾಲ ಕ್ಷೌರಿಕ ವೃತ್ತಿ ನಡೆಸುತ್ತಿದ್ದರು. ಬಳಿಕ ಇತ್ತೀಚಿನ ಕೆಲ‌ ವರ್ಷಗಳಿಂದ ಆರ್.ಕೆ ಸೆಲೂನ್ ಎಂಬ ಸ್ವಂತ ಅಂಗಡಿ ಹೊಂದಿ ವೃತ್ತಿ ಮುಂದುವರಿಸಿಕೊಂಡು ಹೋಗುತ್ತಿದ್ದರು.

ಜೊತೆಗೆ ಉಜಿರೆ ಪೇಟೆಯಲ್ಲಿ ಆರ್ ಕೆ ಬೇಕರಿ ಕೂಡ ಹೊಂದಿದ್ದರು. ಇವರು ಉಜಿರೆ ಸುರ್ಯ ರಸ್ತೆಯಲ್ಲಿ ನೂತನ ಗೃಹ ನಿರ್ಮಿಸಿದ್ದು ತಿಂಗಳ ಹಿಂದಷ್ಟೇ ಅದ್ದೂರಿಯ ಗೃಹಪ್ರವೇಶ ಕಾರ್ಯಕ್ರಮ ನಡೆದಿತ್ತು.

ಮೃತರು ತಂದೆ, ತಾಯಿ, ಓರ್ವ ಸಹೋದರ ಕಮಲಾಕ್ಷ ಭಂಡಾರಿ, ಪತ್ನಿ ತಾರಾ, ಮಕ್ಕಳಾದ ತೇಜಶ್ವಿನಿ ಮತ್ತು ಪವನ್ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

Suddi Udaya
error: Content is protected !!