September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೂವರು ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಬಿ.ಎಸ್.ಅಬ್ದುಲ್ ಖಾದರ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಕಚೇರಿಗೆ ಮಾ.24 ರಂದು ಸಂಜೆ ಭೇಟಿ ಮಾಡಿ ಪ್ರಕರಣ ಬಗ್ಗೆ ಮಾಹಿತಿ ಪಡೆದುಕೊಂಡು ಹತ್ಯೆ ಯಾವ ಕಾರಣಕ್ಕೆ ಮಾಡಿದ್ದಾರೆ ಇದರ ಹಿಂದಿರುವ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಜೊತೆಗೆ ಮೂವರ ಮೃತದೇಹದ ಡಿಎನ್ಎ ಪರೀಕ್ಷೆ ಅದಷ್ಟು ಬೇಗ ಮಾಡಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲು ಮನವಿ ಮಾಡಿಕೊಂಡರು. ಈ ವೇಳೆ ಎಡಿಷನ್ ಎಸ್ಪಿ ಅಬ್ದುಲ್ ಖಾದರ್ ಅವರು ಈ ಮೂರು ಜನರ ಹತ್ಯೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಇನ್ನೂ ಎರಡು ದಿನದ ಒಳಗೆ ಪ್ರಕರಣದ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.ತುಮಕೂರು ಎಡಿಷನ್ ಎಸ್ಪಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ವೇಳೆ ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಮತ್ತು ಬೆಳ್ತಂಗಡಿ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಂ ಕೊಕ್ಕಡ ಜೊತೆಯಲ್ಲಿದ್ದರು.

Related posts

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ಒಂದು ದಿನದ ಪುನರ್ಮನನ ಶಿಬಿರ

Suddi Udaya
error: Content is protected !!