23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಆಚರಿಸಲಾಯಿತು. ಜಯಗೋಷಗಳೊಂದಿಗೆನ ಏಸುಕ್ರಿಸ್ತರ ಜೆರುಸಲೇಮ್ ಪ್ರವೇಶವನ್ನು ಗರಿಗಳ ಹಬ್ಬವೆಂದು ಆಚರಿಸಲಾಗುತ್ತದೆ.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷರಾದ ಅತಿ ವಂದನೀಯ ಬಿಷಫ್ ಲಾರೆನ್ಸ್ ಮುಕ್ಕುಯಿಯವರು ಆಚರಣೆಗಳ ನೇತೃತ್ವ ವಹಿಸಿದ್ದರು. ವಂದನೀಯ ಫಾದರ್ ಟೋಮಿ ಮಟ್ಟಂ , ವಂದನೀಯ ಫಾದರ್ ಲಾರೆನ್ಸ್ ಫೋನೊಲಿಲ್, ವಂದನೀಯ ಫಾದರ್ ಕುರಿಯಕೋಸ್ ಧರ್ಮ ಭಗನಿಯರು ಹಾಗೂ ವಿಶ್ವಾಸಿಗಳು ಹಬ್ಬದಲ್ಲಿ ಪಾಲ್ಗೊಂಡರು.

ಕ್ರಿಸ್ತರ ಚರಿತ್ರೆ ಪ್ರವೇಶವು ಅವರ ಸಹನ ಹಾಗೂ ಶಿಲುಬೆ ಮರಣದ ಮುನ್ನುಡಿ. ಜೆರುಸಲೇಮ್ ಪ್ರವೇಶ ಕ್ರಿಸ್ತರ ಸಹನೆ, ಮರಣ ಹಾಗೂ ಉದ್ಯಾನದ ಕಡೆಗಿನ ದಾರಿಯ ಆರಂಭ. ಜಯ ಘೋಷ ಹಾಡಿದ ಅದೇ ಜನರು ಅವರನ್ನು ಕೊಲ್ಲಲು ಅಧಿಕಾರಿಗಳನ್ನು ಒತ್ತಾಯಿಸುತ್ತಾರೆ. ಅದೇ ಜನರ ಪಾಪ ಪರಿಹಾರಕ್ಕಾಗಿ ಏಸುಕ್ರಿಸ್ತರು ಶಿಲುಬೆಗೇರಿ ಮರಣ ಹೊಂದುವರು. ಇದು ಕ್ರೈಸ್ತ ಬಾಂಧವರಿಗೆ ಪವಿತ್ರ ವಾರ.

ಯೇಸು ಕ್ರಿಸ್ತರ ಜೆರುಸಲೇಮ್ ಪ್ರವೇಶದಿಂದ ಈಸ್ಟರ್ ಆದಿತ್ಯವಾರದ ತನಕಿನ ದಿನಗಳು ಕ್ಷಮೆಯ ಕರುಣೆಯ ದೇವರ ಪ್ರೀತಿಯನ್ನು ಮನುಕುಲಕ್ಕೆ ತಿಳಿಯಪಡಿಸಿದ ದಿನಗಳಾಗಿವೆ. ಯೇಸುಕ್ರಿಸ್ತರನ್ನು ಜೆರುಸಲೇಮ್ ನಗರಕ್ಕೆ ಒತ್ತುಹೊಯ್ದ , ಏಸುಕ್ರಿಸ್ತರ ಸಂದೇಶವನ್ನು ಲೋಕಕ್ಕೆ ಸಾರಲು ಈ ಹಬ್ಬವು ಕರೆ ನೀಡುತ್ತದೆ.

Related posts

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!