23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಆಚರಿಸಲಾಯಿತು. ಜಯಗೋಷಗಳೊಂದಿಗೆನ ಏಸುಕ್ರಿಸ್ತರ ಜೆರುಸಲೇಮ್ ಪ್ರವೇಶವನ್ನು ಗರಿಗಳ ಹಬ್ಬವೆಂದು ಆಚರಿಸಲಾಗುತ್ತದೆ.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷರಾದ ಅತಿ ವಂದನೀಯ ಬಿಷಫ್ ಲಾರೆನ್ಸ್ ಮುಕ್ಕುಯಿಯವರು ಆಚರಣೆಗಳ ನೇತೃತ್ವ ವಹಿಸಿದ್ದರು. ವಂದನೀಯ ಫಾದರ್ ಟೋಮಿ ಮಟ್ಟಂ , ವಂದನೀಯ ಫಾದರ್ ಲಾರೆನ್ಸ್ ಫೋನೊಲಿಲ್, ವಂದನೀಯ ಫಾದರ್ ಕುರಿಯಕೋಸ್ ಧರ್ಮ ಭಗನಿಯರು ಹಾಗೂ ವಿಶ್ವಾಸಿಗಳು ಹಬ್ಬದಲ್ಲಿ ಪಾಲ್ಗೊಂಡರು.

ಕ್ರಿಸ್ತರ ಚರಿತ್ರೆ ಪ್ರವೇಶವು ಅವರ ಸಹನ ಹಾಗೂ ಶಿಲುಬೆ ಮರಣದ ಮುನ್ನುಡಿ. ಜೆರುಸಲೇಮ್ ಪ್ರವೇಶ ಕ್ರಿಸ್ತರ ಸಹನೆ, ಮರಣ ಹಾಗೂ ಉದ್ಯಾನದ ಕಡೆಗಿನ ದಾರಿಯ ಆರಂಭ. ಜಯ ಘೋಷ ಹಾಡಿದ ಅದೇ ಜನರು ಅವರನ್ನು ಕೊಲ್ಲಲು ಅಧಿಕಾರಿಗಳನ್ನು ಒತ್ತಾಯಿಸುತ್ತಾರೆ. ಅದೇ ಜನರ ಪಾಪ ಪರಿಹಾರಕ್ಕಾಗಿ ಏಸುಕ್ರಿಸ್ತರು ಶಿಲುಬೆಗೇರಿ ಮರಣ ಹೊಂದುವರು. ಇದು ಕ್ರೈಸ್ತ ಬಾಂಧವರಿಗೆ ಪವಿತ್ರ ವಾರ.

ಯೇಸು ಕ್ರಿಸ್ತರ ಜೆರುಸಲೇಮ್ ಪ್ರವೇಶದಿಂದ ಈಸ್ಟರ್ ಆದಿತ್ಯವಾರದ ತನಕಿನ ದಿನಗಳು ಕ್ಷಮೆಯ ಕರುಣೆಯ ದೇವರ ಪ್ರೀತಿಯನ್ನು ಮನುಕುಲಕ್ಕೆ ತಿಳಿಯಪಡಿಸಿದ ದಿನಗಳಾಗಿವೆ. ಯೇಸುಕ್ರಿಸ್ತರನ್ನು ಜೆರುಸಲೇಮ್ ನಗರಕ್ಕೆ ಒತ್ತುಹೊಯ್ದ , ಏಸುಕ್ರಿಸ್ತರ ಸಂದೇಶವನ್ನು ಲೋಕಕ್ಕೆ ಸಾರಲು ಈ ಹಬ್ಬವು ಕರೆ ನೀಡುತ್ತದೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಹಾಗೂ ಮುಂಡಾಜೆ ಬೂತ್ ಪ್ರಗತಿ ಸಭೆ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!