September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ತನ್ನ ಮೇಲೆ ಪುತ್ರ ಹಾಗೂ ಸೊಸೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ತಂದೆ ವೇಣೂರು ಠಾಣೆಗೆ ದೂರು ನೀಡಿದ್ದಾರೆ.

ಶಿರ್ಲಾಲು ಗ್ರಾಮದ ಸರಪ್ಪಾಡಿ ಮನೆ ನಿವಾಸಿಯಾಗಿರುವ ಸುಂದರ ಪೂಜಾರಿ(75) ಎಂಬವರೇ ದೂರು ನೀಡಿದವರಾಗಿದ್ದಾರೆ. ಸುಂದರ ಪೂಜಾರಿ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ನನ್ನ ಹೆಸರಿನಲ್ಲಿರುವ ಜಮೀನನ್ನು ತನ್ನೋಬ್ಬನ ಹೆಸರಿಗೆ ಬರೆದು ಕೊಡುವಂತೆ ಒತ್ತಾಯಿಸಿ ಪುತ್ರ ಹಾಗೂ ಸೊಸೆ ಆಗಾಗ ಜಗಳ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.ಮಾ.21ರಂದು ಸಂಜೆಯ ವೇಳೆ ಪುತ್ರ ಮನೆಯಲ್ಲಿ ಇದ್ದ ಅಡಿಕೆಯನ್ನು ತೆಗೆದುಕೊಂಡು ಹೋಗಲು ಮುಂದಾಗಿದ್ದು ಈ ವೇಳೆ ನಾನು ಪ್ರಶ್ನಿಸಿದಾಗ ಕೋಪಗೊಂಡ ಮಗ ಹಾಗೂ ಸೊಸೆ ಅಡಿಕೆ ಮರದ ಸಲಾಕೆಯಿಂದ ಹಲ್ಲೆ ನಡೆಸಿ ಕೊಲೆಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ .

ಹಲ್ಲೆಗೆ ಒಳಗಾಗಿರುವ ಸುಂದರ ಪೂಜಾರಿ ಆಸ್ಪತ್ರೆಗೆ ದಾಖಲಾಗಿದ್ದು ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Related posts

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರೆ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya
error: Content is protected !!