ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

ಉಜಿರೆ: ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಭೇಟಿ ನೀಡಿ ಸರಕಾರಿ ಶಾಲೆಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸೇವೆ ಶ್ಲಾಘನೀಯ. ಇದು ನಿಜವಾದ ಸಮಾಜಸೇವೆ ಎಂದರು.

ಕಳೆದ ಒಂದೂವರೆ ತಿಂಗಳ ಹಿಂದೆ ಶಾಲೆಯನ್ನು ಜೀರ್ಣೋದ್ಧಾರಗೊಳಿಸುವ ನಿಟ್ಟಿನಲ್ಲಿ ಬದುಕು ಕಟ್ಟೋಣ ಬನ್ನಿ ತಂಡ ಹಾಗೂ ಇತರ ಸಂಘ ಸಂಸ್ಥೆಗಳು ಸೇರಿ ಶಾಲೆಯಲ್ಲಿ ಶ್ರಮದಾನದ ಮೂಲಕ ಕೆಲಸ ಪ್ರಾರಂಭಿಸಲಾಗಿತ್ತು. ಕೆಲಸ ಪ್ರಾರಂಭಿಸಿ ಇಂದಿಗೆ 50 ದಿನಗಳು ಮುಗಿಯುವಷ್ಟರಲ್ಲಿ ಹೆಚ್ಚಿನ ಕೆಲಸಗಳು ನಡೆದಿದೆ.

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಎಸ್.ಡಿ.ಎಂ ಸ್ಪೋರ್ಟ್ಸ್ ವಿದ್ಯಾರ್ಥಿಗಳು, ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರು ಶಾಲೆಯಲ್ಲಿ ಶ್ರಮದಾನ ನಡೆಸಿದರು.

ಈ ಸಂದರ್ಭದಲ್ಲಿ ಪೂರನ್ ವರ್ಮ,ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ,ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ,ಕಾರ್ಯದರ್ಶಿ ವಿದ್ಯಾ,ಎಸ್.ಡಿ.ಎಂ ದೈಹಿಕ ಶಿಕ್ಷಣ ಶಿಕ್ಷಕ ರಮೇಶ್, ಶಾಲಾಭಿವೃದ್ದಿ ಸಮಿತಿ ಪದಾಧಿಕಾರಿಗಳು,ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Related posts

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya
error: Content is protected !!