22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

ಬೆಳ್ತಂಗಡಿ; ಮೂಲತಃ ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ‌ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯ ನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾ.24 ರಂದು ನಡೆದಿದೆ.

ಉಜಿರೆಯ ಪ್ರಸಿದ್ಧ ರಾಜ್ ಹೇರ್ ಡ್ರೆಸ್ಸಸ್ ಸಂಸ್ಥೆಯ ಮಾಲಿಕರಾಗಿರುವ ದೇವರಾಜ ಭಂಡಾರಿ ಮತ್ತು ರತ್ನಾವತಿ ದಂಪತಿ ಪುತ್ರನಾಗಿರುವ ಅವರು ತಂದೆಯ ಜೊತೆಗೇ ದೀರ್ಘ ಕಾಲ ಕ್ಷೌರಿಕ ವೃತ್ತಿ ನಡೆಸುತ್ತಿದ್ದರು. ಬಳಿಕ ಇತ್ತೀಚಿನ ಕೆಲ‌ ವರ್ಷಗಳಿಂದ ಆರ್.ಕೆ ಸೆಲೂನ್ ಎಂಬ ಸ್ವಂತ ಅಂಗಡಿ ಹೊಂದಿ ವೃತ್ತಿ ಮುಂದುವರಿಸಿಕೊಂಡು ಹೋಗುತ್ತಿದ್ದರು.

ಜೊತೆಗೆ ಉಜಿರೆ ಪೇಟೆಯಲ್ಲಿ ಆರ್ ಕೆ ಬೇಕರಿ ಕೂಡ ಹೊಂದಿದ್ದರು. ಇವರು ಉಜಿರೆ ಸುರ್ಯ ರಸ್ತೆಯಲ್ಲಿ ನೂತನ ಗೃಹ ನಿರ್ಮಿಸಿದ್ದು ತಿಂಗಳ ಹಿಂದಷ್ಟೇ ಅದ್ದೂರಿಯ ಗೃಹಪ್ರವೇಶ ಕಾರ್ಯಕ್ರಮ ನಡೆದಿತ್ತು.

ಮೃತರು ತಂದೆ, ತಾಯಿ, ಓರ್ವ ಸಹೋದರ ಕಮಲಾಕ್ಷ ಭಂಡಾರಿ, ಪತ್ನಿ ತಾರಾ, ಮಕ್ಕಳಾದ ತೇಜಶ್ವಿನಿ ಮತ್ತು ಪವನ್ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya
error: Content is protected !!