25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

ಬೆಳ್ತಂಗಡಿ; ಮೂಲತಃ ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ‌ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯ ನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾ.24 ರಂದು ನಡೆದಿದೆ.

ಉಜಿರೆಯ ಪ್ರಸಿದ್ಧ ರಾಜ್ ಹೇರ್ ಡ್ರೆಸ್ಸಸ್ ಸಂಸ್ಥೆಯ ಮಾಲಿಕರಾಗಿರುವ ದೇವರಾಜ ಭಂಡಾರಿ ಮತ್ತು ರತ್ನಾವತಿ ದಂಪತಿ ಪುತ್ರನಾಗಿರುವ ಅವರು ತಂದೆಯ ಜೊತೆಗೇ ದೀರ್ಘ ಕಾಲ ಕ್ಷೌರಿಕ ವೃತ್ತಿ ನಡೆಸುತ್ತಿದ್ದರು. ಬಳಿಕ ಇತ್ತೀಚಿನ ಕೆಲ‌ ವರ್ಷಗಳಿಂದ ಆರ್.ಕೆ ಸೆಲೂನ್ ಎಂಬ ಸ್ವಂತ ಅಂಗಡಿ ಹೊಂದಿ ವೃತ್ತಿ ಮುಂದುವರಿಸಿಕೊಂಡು ಹೋಗುತ್ತಿದ್ದರು.

ಜೊತೆಗೆ ಉಜಿರೆ ಪೇಟೆಯಲ್ಲಿ ಆರ್ ಕೆ ಬೇಕರಿ ಕೂಡ ಹೊಂದಿದ್ದರು. ಇವರು ಉಜಿರೆ ಸುರ್ಯ ರಸ್ತೆಯಲ್ಲಿ ನೂತನ ಗೃಹ ನಿರ್ಮಿಸಿದ್ದು ತಿಂಗಳ ಹಿಂದಷ್ಟೇ ಅದ್ದೂರಿಯ ಗೃಹಪ್ರವೇಶ ಕಾರ್ಯಕ್ರಮ ನಡೆದಿತ್ತು.

ಮೃತರು ತಂದೆ, ತಾಯಿ, ಓರ್ವ ಸಹೋದರ ಕಮಲಾಕ್ಷ ಭಂಡಾರಿ, ಪತ್ನಿ ತಾರಾ, ಮಕ್ಕಳಾದ ತೇಜಶ್ವಿನಿ ಮತ್ತು ಪವನ್ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya
error: Content is protected !!