September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

ಬೆಳ್ತಂಗಡಿ : ಮೂವರು ಬೆಳ್ತಂಗಡಿ ತಾಲೂಕಿನವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮಾ.24 ರಂದು ಸಂಜೆ ಭೇಟಿ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು.

ಅದಲ್ಲದೆ ಮೃತದೇಹದ ಡಿಎನ್ಎ ಪರೀಕ್ಷೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಈ ವೇಳೆ ತುಮಕೂರು ಪೊಲೀಸ್ ಅಧಿಕಾರಿಯನ್ನು ಗೃಹ ಸಚಿವರು‌ ಕರೆ ಮಾಡಿ ಕರೆಸಿಕೊಂಡು ಪ್ರಕರಣದ ಬಗ್ಗೆ ಮಾಹಿತಿ ಪಡೆದರು. ಪೊಲೀಸ್ ಅಧಿಕಾರಿ ಪ್ರಕರಣದ ಎಲ್ಲಾ ಮಾಹಿತಿಯನ್ನು ವಿವರಿಸಿದ್ದು. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು. ಇನ್ನೂ ಎರಡು ದಿನದಲ್ಲಿ ಪ್ರಕರಣದ ಬಗ್ಗೆ ಪತ್ರಿಕಾಗೋಷ್ಠಿ ಮಾಡಿ ತಿಳಿಸಲಾಗುವುದು ಎಂದು ಹೇಳಿದರು.

ತುಮಕೂರು ಎಡಿಷನ್ ಎಸ್ಪಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ವೇಳೆ ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಮತ್ತು ಬೆಳ್ತಂಗಡಿ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಂ ಕೊಕ್ಕಡ ಜೊತೆಯಲ್ಲಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya
error: Content is protected !!