25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

ಬೆಳ್ತಂಗಡಿ : ಮೂವರು ಬೆಳ್ತಂಗಡಿ ತಾಲೂಕಿನವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮಾ.24 ರಂದು ಸಂಜೆ ಭೇಟಿ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು.

ಅದಲ್ಲದೆ ಮೃತದೇಹದ ಡಿಎನ್ಎ ಪರೀಕ್ಷೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಈ ವೇಳೆ ತುಮಕೂರು ಪೊಲೀಸ್ ಅಧಿಕಾರಿಯನ್ನು ಗೃಹ ಸಚಿವರು‌ ಕರೆ ಮಾಡಿ ಕರೆಸಿಕೊಂಡು ಪ್ರಕರಣದ ಬಗ್ಗೆ ಮಾಹಿತಿ ಪಡೆದರು. ಪೊಲೀಸ್ ಅಧಿಕಾರಿ ಪ್ರಕರಣದ ಎಲ್ಲಾ ಮಾಹಿತಿಯನ್ನು ವಿವರಿಸಿದ್ದು. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು. ಇನ್ನೂ ಎರಡು ದಿನದಲ್ಲಿ ಪ್ರಕರಣದ ಬಗ್ಗೆ ಪತ್ರಿಕಾಗೋಷ್ಠಿ ಮಾಡಿ ತಿಳಿಸಲಾಗುವುದು ಎಂದು ಹೇಳಿದರು.

ತುಮಕೂರು ಎಡಿಷನ್ ಎಸ್ಪಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ವೇಳೆ ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಮತ್ತು ಬೆಳ್ತಂಗಡಿ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಂ ಕೊಕ್ಕಡ ಜೊತೆಯಲ್ಲಿದ್ದರು.

Related posts

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya
error: Content is protected !!