25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

ಬೆಳ್ತಂಗಡಿ : ಮೂವರು ಬೆಳ್ತಂಗಡಿ ತಾಲೂಕಿನವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮಾ.24 ರಂದು ಸಂಜೆ ಭೇಟಿ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು.

ಅದಲ್ಲದೆ ಮೃತದೇಹದ ಡಿಎನ್ಎ ಪರೀಕ್ಷೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಈ ವೇಳೆ ತುಮಕೂರು ಪೊಲೀಸ್ ಅಧಿಕಾರಿಯನ್ನು ಗೃಹ ಸಚಿವರು‌ ಕರೆ ಮಾಡಿ ಕರೆಸಿಕೊಂಡು ಪ್ರಕರಣದ ಬಗ್ಗೆ ಮಾಹಿತಿ ಪಡೆದರು. ಪೊಲೀಸ್ ಅಧಿಕಾರಿ ಪ್ರಕರಣದ ಎಲ್ಲಾ ಮಾಹಿತಿಯನ್ನು ವಿವರಿಸಿದ್ದು. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು. ಇನ್ನೂ ಎರಡು ದಿನದಲ್ಲಿ ಪ್ರಕರಣದ ಬಗ್ಗೆ ಪತ್ರಿಕಾಗೋಷ್ಠಿ ಮಾಡಿ ತಿಳಿಸಲಾಗುವುದು ಎಂದು ಹೇಳಿದರು.

ತುಮಕೂರು ಎಡಿಷನ್ ಎಸ್ಪಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ವೇಳೆ ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಮತ್ತು ಬೆಳ್ತಂಗಡಿ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಂ ಕೊಕ್ಕಡ ಜೊತೆಯಲ್ಲಿದ್ದರು.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya
error: Content is protected !!