25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೂವರು ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಬಿ.ಎಸ್.ಅಬ್ದುಲ್ ಖಾದರ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಕಚೇರಿಗೆ ಮಾ.24 ರಂದು ಸಂಜೆ ಭೇಟಿ ಮಾಡಿ ಪ್ರಕರಣ ಬಗ್ಗೆ ಮಾಹಿತಿ ಪಡೆದುಕೊಂಡು ಹತ್ಯೆ ಯಾವ ಕಾರಣಕ್ಕೆ ಮಾಡಿದ್ದಾರೆ ಇದರ ಹಿಂದಿರುವ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಜೊತೆಗೆ ಮೂವರ ಮೃತದೇಹದ ಡಿಎನ್ಎ ಪರೀಕ್ಷೆ ಅದಷ್ಟು ಬೇಗ ಮಾಡಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲು ಮನವಿ ಮಾಡಿಕೊಂಡರು. ಈ ವೇಳೆ ಎಡಿಷನ್ ಎಸ್ಪಿ ಅಬ್ದುಲ್ ಖಾದರ್ ಅವರು ಈ ಮೂರು ಜನರ ಹತ್ಯೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಇನ್ನೂ ಎರಡು ದಿನದ ಒಳಗೆ ಪ್ರಕರಣದ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.ತುಮಕೂರು ಎಡಿಷನ್ ಎಸ್ಪಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ವೇಳೆ ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಮತ್ತು ಬೆಳ್ತಂಗಡಿ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಂ ಕೊಕ್ಕಡ ಜೊತೆಯಲ್ಲಿದ್ದರು.

Related posts

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya
error: Content is protected !!