23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಆಚರಿಸಲಾಯಿತು. ಜಯಗೋಷಗಳೊಂದಿಗೆನ ಏಸುಕ್ರಿಸ್ತರ ಜೆರುಸಲೇಮ್ ಪ್ರವೇಶವನ್ನು ಗರಿಗಳ ಹಬ್ಬವೆಂದು ಆಚರಿಸಲಾಗುತ್ತದೆ.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷರಾದ ಅತಿ ವಂದನೀಯ ಬಿಷಫ್ ಲಾರೆನ್ಸ್ ಮುಕ್ಕುಯಿಯವರು ಆಚರಣೆಗಳ ನೇತೃತ್ವ ವಹಿಸಿದ್ದರು. ವಂದನೀಯ ಫಾದರ್ ಟೋಮಿ ಮಟ್ಟಂ , ವಂದನೀಯ ಫಾದರ್ ಲಾರೆನ್ಸ್ ಫೋನೊಲಿಲ್, ವಂದನೀಯ ಫಾದರ್ ಕುರಿಯಕೋಸ್ ಧರ್ಮ ಭಗನಿಯರು ಹಾಗೂ ವಿಶ್ವಾಸಿಗಳು ಹಬ್ಬದಲ್ಲಿ ಪಾಲ್ಗೊಂಡರು.

ಕ್ರಿಸ್ತರ ಚರಿತ್ರೆ ಪ್ರವೇಶವು ಅವರ ಸಹನ ಹಾಗೂ ಶಿಲುಬೆ ಮರಣದ ಮುನ್ನುಡಿ. ಜೆರುಸಲೇಮ್ ಪ್ರವೇಶ ಕ್ರಿಸ್ತರ ಸಹನೆ, ಮರಣ ಹಾಗೂ ಉದ್ಯಾನದ ಕಡೆಗಿನ ದಾರಿಯ ಆರಂಭ. ಜಯ ಘೋಷ ಹಾಡಿದ ಅದೇ ಜನರು ಅವರನ್ನು ಕೊಲ್ಲಲು ಅಧಿಕಾರಿಗಳನ್ನು ಒತ್ತಾಯಿಸುತ್ತಾರೆ. ಅದೇ ಜನರ ಪಾಪ ಪರಿಹಾರಕ್ಕಾಗಿ ಏಸುಕ್ರಿಸ್ತರು ಶಿಲುಬೆಗೇರಿ ಮರಣ ಹೊಂದುವರು. ಇದು ಕ್ರೈಸ್ತ ಬಾಂಧವರಿಗೆ ಪವಿತ್ರ ವಾರ.

ಯೇಸು ಕ್ರಿಸ್ತರ ಜೆರುಸಲೇಮ್ ಪ್ರವೇಶದಿಂದ ಈಸ್ಟರ್ ಆದಿತ್ಯವಾರದ ತನಕಿನ ದಿನಗಳು ಕ್ಷಮೆಯ ಕರುಣೆಯ ದೇವರ ಪ್ರೀತಿಯನ್ನು ಮನುಕುಲಕ್ಕೆ ತಿಳಿಯಪಡಿಸಿದ ದಿನಗಳಾಗಿವೆ. ಯೇಸುಕ್ರಿಸ್ತರನ್ನು ಜೆರುಸಲೇಮ್ ನಗರಕ್ಕೆ ಒತ್ತುಹೊಯ್ದ , ಏಸುಕ್ರಿಸ್ತರ ಸಂದೇಶವನ್ನು ಲೋಕಕ್ಕೆ ಸಾರಲು ಈ ಹಬ್ಬವು ಕರೆ ನೀಡುತ್ತದೆ.

Related posts

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya
error: Content is protected !!