22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಆಚರಿಸಲಾಯಿತು. ಜಯಗೋಷಗಳೊಂದಿಗೆನ ಏಸುಕ್ರಿಸ್ತರ ಜೆರುಸಲೇಮ್ ಪ್ರವೇಶವನ್ನು ಗರಿಗಳ ಹಬ್ಬವೆಂದು ಆಚರಿಸಲಾಗುತ್ತದೆ.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷರಾದ ಅತಿ ವಂದನೀಯ ಬಿಷಫ್ ಲಾರೆನ್ಸ್ ಮುಕ್ಕುಯಿಯವರು ಆಚರಣೆಗಳ ನೇತೃತ್ವ ವಹಿಸಿದ್ದರು. ವಂದನೀಯ ಫಾದರ್ ಟೋಮಿ ಮಟ್ಟಂ , ವಂದನೀಯ ಫಾದರ್ ಲಾರೆನ್ಸ್ ಫೋನೊಲಿಲ್, ವಂದನೀಯ ಫಾದರ್ ಕುರಿಯಕೋಸ್ ಧರ್ಮ ಭಗನಿಯರು ಹಾಗೂ ವಿಶ್ವಾಸಿಗಳು ಹಬ್ಬದಲ್ಲಿ ಪಾಲ್ಗೊಂಡರು.

ಕ್ರಿಸ್ತರ ಚರಿತ್ರೆ ಪ್ರವೇಶವು ಅವರ ಸಹನ ಹಾಗೂ ಶಿಲುಬೆ ಮರಣದ ಮುನ್ನುಡಿ. ಜೆರುಸಲೇಮ್ ಪ್ರವೇಶ ಕ್ರಿಸ್ತರ ಸಹನೆ, ಮರಣ ಹಾಗೂ ಉದ್ಯಾನದ ಕಡೆಗಿನ ದಾರಿಯ ಆರಂಭ. ಜಯ ಘೋಷ ಹಾಡಿದ ಅದೇ ಜನರು ಅವರನ್ನು ಕೊಲ್ಲಲು ಅಧಿಕಾರಿಗಳನ್ನು ಒತ್ತಾಯಿಸುತ್ತಾರೆ. ಅದೇ ಜನರ ಪಾಪ ಪರಿಹಾರಕ್ಕಾಗಿ ಏಸುಕ್ರಿಸ್ತರು ಶಿಲುಬೆಗೇರಿ ಮರಣ ಹೊಂದುವರು. ಇದು ಕ್ರೈಸ್ತ ಬಾಂಧವರಿಗೆ ಪವಿತ್ರ ವಾರ.

ಯೇಸು ಕ್ರಿಸ್ತರ ಜೆರುಸಲೇಮ್ ಪ್ರವೇಶದಿಂದ ಈಸ್ಟರ್ ಆದಿತ್ಯವಾರದ ತನಕಿನ ದಿನಗಳು ಕ್ಷಮೆಯ ಕರುಣೆಯ ದೇವರ ಪ್ರೀತಿಯನ್ನು ಮನುಕುಲಕ್ಕೆ ತಿಳಿಯಪಡಿಸಿದ ದಿನಗಳಾಗಿವೆ. ಯೇಸುಕ್ರಿಸ್ತರನ್ನು ಜೆರುಸಲೇಮ್ ನಗರಕ್ಕೆ ಒತ್ತುಹೊಯ್ದ , ಏಸುಕ್ರಿಸ್ತರ ಸಂದೇಶವನ್ನು ಲೋಕಕ್ಕೆ ಸಾರಲು ಈ ಹಬ್ಬವು ಕರೆ ನೀಡುತ್ತದೆ.

Related posts

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya
error: Content is protected !!