24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಆಚರಿಸಲಾಯಿತು. ಜಯಗೋಷಗಳೊಂದಿಗೆನ ಏಸುಕ್ರಿಸ್ತರ ಜೆರುಸಲೇಮ್ ಪ್ರವೇಶವನ್ನು ಗರಿಗಳ ಹಬ್ಬವೆಂದು ಆಚರಿಸಲಾಗುತ್ತದೆ.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷರಾದ ಅತಿ ವಂದನೀಯ ಬಿಷಫ್ ಲಾರೆನ್ಸ್ ಮುಕ್ಕುಯಿಯವರು ಆಚರಣೆಗಳ ನೇತೃತ್ವ ವಹಿಸಿದ್ದರು. ವಂದನೀಯ ಫಾದರ್ ಟೋಮಿ ಮಟ್ಟಂ , ವಂದನೀಯ ಫಾದರ್ ಲಾರೆನ್ಸ್ ಫೋನೊಲಿಲ್, ವಂದನೀಯ ಫಾದರ್ ಕುರಿಯಕೋಸ್ ಧರ್ಮ ಭಗನಿಯರು ಹಾಗೂ ವಿಶ್ವಾಸಿಗಳು ಹಬ್ಬದಲ್ಲಿ ಪಾಲ್ಗೊಂಡರು.

ಕ್ರಿಸ್ತರ ಚರಿತ್ರೆ ಪ್ರವೇಶವು ಅವರ ಸಹನ ಹಾಗೂ ಶಿಲುಬೆ ಮರಣದ ಮುನ್ನುಡಿ. ಜೆರುಸಲೇಮ್ ಪ್ರವೇಶ ಕ್ರಿಸ್ತರ ಸಹನೆ, ಮರಣ ಹಾಗೂ ಉದ್ಯಾನದ ಕಡೆಗಿನ ದಾರಿಯ ಆರಂಭ. ಜಯ ಘೋಷ ಹಾಡಿದ ಅದೇ ಜನರು ಅವರನ್ನು ಕೊಲ್ಲಲು ಅಧಿಕಾರಿಗಳನ್ನು ಒತ್ತಾಯಿಸುತ್ತಾರೆ. ಅದೇ ಜನರ ಪಾಪ ಪರಿಹಾರಕ್ಕಾಗಿ ಏಸುಕ್ರಿಸ್ತರು ಶಿಲುಬೆಗೇರಿ ಮರಣ ಹೊಂದುವರು. ಇದು ಕ್ರೈಸ್ತ ಬಾಂಧವರಿಗೆ ಪವಿತ್ರ ವಾರ.

ಯೇಸು ಕ್ರಿಸ್ತರ ಜೆರುಸಲೇಮ್ ಪ್ರವೇಶದಿಂದ ಈಸ್ಟರ್ ಆದಿತ್ಯವಾರದ ತನಕಿನ ದಿನಗಳು ಕ್ಷಮೆಯ ಕರುಣೆಯ ದೇವರ ಪ್ರೀತಿಯನ್ನು ಮನುಕುಲಕ್ಕೆ ತಿಳಿಯಪಡಿಸಿದ ದಿನಗಳಾಗಿವೆ. ಯೇಸುಕ್ರಿಸ್ತರನ್ನು ಜೆರುಸಲೇಮ್ ನಗರಕ್ಕೆ ಒತ್ತುಹೊಯ್ದ , ಏಸುಕ್ರಿಸ್ತರ ಸಂದೇಶವನ್ನು ಲೋಕಕ್ಕೆ ಸಾರಲು ಈ ಹಬ್ಬವು ಕರೆ ನೀಡುತ್ತದೆ.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya
error: Content is protected !!