September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ತನ್ನ ಮೇಲೆ ಪುತ್ರ ಹಾಗೂ ಸೊಸೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ತಂದೆ ವೇಣೂರು ಠಾಣೆಗೆ ದೂರು ನೀಡಿದ್ದಾರೆ.

ಶಿರ್ಲಾಲು ಗ್ರಾಮದ ಸರಪ್ಪಾಡಿ ಮನೆ ನಿವಾಸಿಯಾಗಿರುವ ಸುಂದರ ಪೂಜಾರಿ(75) ಎಂಬವರೇ ದೂರು ನೀಡಿದವರಾಗಿದ್ದಾರೆ. ಸುಂದರ ಪೂಜಾರಿ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ನನ್ನ ಹೆಸರಿನಲ್ಲಿರುವ ಜಮೀನನ್ನು ತನ್ನೋಬ್ಬನ ಹೆಸರಿಗೆ ಬರೆದು ಕೊಡುವಂತೆ ಒತ್ತಾಯಿಸಿ ಪುತ್ರ ಹಾಗೂ ಸೊಸೆ ಆಗಾಗ ಜಗಳ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.ಮಾ.21ರಂದು ಸಂಜೆಯ ವೇಳೆ ಪುತ್ರ ಮನೆಯಲ್ಲಿ ಇದ್ದ ಅಡಿಕೆಯನ್ನು ತೆಗೆದುಕೊಂಡು ಹೋಗಲು ಮುಂದಾಗಿದ್ದು ಈ ವೇಳೆ ನಾನು ಪ್ರಶ್ನಿಸಿದಾಗ ಕೋಪಗೊಂಡ ಮಗ ಹಾಗೂ ಸೊಸೆ ಅಡಿಕೆ ಮರದ ಸಲಾಕೆಯಿಂದ ಹಲ್ಲೆ ನಡೆಸಿ ಕೊಲೆಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ .

ಹಲ್ಲೆಗೆ ಒಳಗಾಗಿರುವ ಸುಂದರ ಪೂಜಾರಿ ಆಸ್ಪತ್ರೆಗೆ ದಾಖಲಾಗಿದ್ದು ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Related posts

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya
error: Content is protected !!