25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ತನ್ನ ಮೇಲೆ ಪುತ್ರ ಹಾಗೂ ಸೊಸೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ತಂದೆ ವೇಣೂರು ಠಾಣೆಗೆ ದೂರು ನೀಡಿದ್ದಾರೆ.

ಶಿರ್ಲಾಲು ಗ್ರಾಮದ ಸರಪ್ಪಾಡಿ ಮನೆ ನಿವಾಸಿಯಾಗಿರುವ ಸುಂದರ ಪೂಜಾರಿ(75) ಎಂಬವರೇ ದೂರು ನೀಡಿದವರಾಗಿದ್ದಾರೆ. ಸುಂದರ ಪೂಜಾರಿ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ನನ್ನ ಹೆಸರಿನಲ್ಲಿರುವ ಜಮೀನನ್ನು ತನ್ನೋಬ್ಬನ ಹೆಸರಿಗೆ ಬರೆದು ಕೊಡುವಂತೆ ಒತ್ತಾಯಿಸಿ ಪುತ್ರ ಹಾಗೂ ಸೊಸೆ ಆಗಾಗ ಜಗಳ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.ಮಾ.21ರಂದು ಸಂಜೆಯ ವೇಳೆ ಪುತ್ರ ಮನೆಯಲ್ಲಿ ಇದ್ದ ಅಡಿಕೆಯನ್ನು ತೆಗೆದುಕೊಂಡು ಹೋಗಲು ಮುಂದಾಗಿದ್ದು ಈ ವೇಳೆ ನಾನು ಪ್ರಶ್ನಿಸಿದಾಗ ಕೋಪಗೊಂಡ ಮಗ ಹಾಗೂ ಸೊಸೆ ಅಡಿಕೆ ಮರದ ಸಲಾಕೆಯಿಂದ ಹಲ್ಲೆ ನಡೆಸಿ ಕೊಲೆಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ .

ಹಲ್ಲೆಗೆ ಒಳಗಾಗಿರುವ ಸುಂದರ ಪೂಜಾರಿ ಆಸ್ಪತ್ರೆಗೆ ದಾಖಲಾಗಿದ್ದು ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Related posts

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!