22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ತನ್ನ ಮೇಲೆ ಪುತ್ರ ಹಾಗೂ ಸೊಸೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ತಂದೆ ವೇಣೂರು ಠಾಣೆಗೆ ದೂರು ನೀಡಿದ್ದಾರೆ.

ಶಿರ್ಲಾಲು ಗ್ರಾಮದ ಸರಪ್ಪಾಡಿ ಮನೆ ನಿವಾಸಿಯಾಗಿರುವ ಸುಂದರ ಪೂಜಾರಿ(75) ಎಂಬವರೇ ದೂರು ನೀಡಿದವರಾಗಿದ್ದಾರೆ. ಸುಂದರ ಪೂಜಾರಿ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ನನ್ನ ಹೆಸರಿನಲ್ಲಿರುವ ಜಮೀನನ್ನು ತನ್ನೋಬ್ಬನ ಹೆಸರಿಗೆ ಬರೆದು ಕೊಡುವಂತೆ ಒತ್ತಾಯಿಸಿ ಪುತ್ರ ಹಾಗೂ ಸೊಸೆ ಆಗಾಗ ಜಗಳ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.ಮಾ.21ರಂದು ಸಂಜೆಯ ವೇಳೆ ಪುತ್ರ ಮನೆಯಲ್ಲಿ ಇದ್ದ ಅಡಿಕೆಯನ್ನು ತೆಗೆದುಕೊಂಡು ಹೋಗಲು ಮುಂದಾಗಿದ್ದು ಈ ವೇಳೆ ನಾನು ಪ್ರಶ್ನಿಸಿದಾಗ ಕೋಪಗೊಂಡ ಮಗ ಹಾಗೂ ಸೊಸೆ ಅಡಿಕೆ ಮರದ ಸಲಾಕೆಯಿಂದ ಹಲ್ಲೆ ನಡೆಸಿ ಕೊಲೆಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ .

ಹಲ್ಲೆಗೆ ಒಳಗಾಗಿರುವ ಸುಂದರ ಪೂಜಾರಿ ಆಸ್ಪತ್ರೆಗೆ ದಾಖಲಾಗಿದ್ದು ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Related posts

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya
error: Content is protected !!