25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

ಬೆಳ್ತಂಗಡಿ; ಮೂಲತಃ ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ‌ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯ ನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾ.24 ರಂದು ನಡೆದಿದೆ.

ಉಜಿರೆಯ ಪ್ರಸಿದ್ಧ ರಾಜ್ ಹೇರ್ ಡ್ರೆಸ್ಸಸ್ ಸಂಸ್ಥೆಯ ಮಾಲಿಕರಾಗಿರುವ ದೇವರಾಜ ಭಂಡಾರಿ ಮತ್ತು ರತ್ನಾವತಿ ದಂಪತಿ ಪುತ್ರನಾಗಿರುವ ಅವರು ತಂದೆಯ ಜೊತೆಗೇ ದೀರ್ಘ ಕಾಲ ಕ್ಷೌರಿಕ ವೃತ್ತಿ ನಡೆಸುತ್ತಿದ್ದರು. ಬಳಿಕ ಇತ್ತೀಚಿನ ಕೆಲ‌ ವರ್ಷಗಳಿಂದ ಆರ್.ಕೆ ಸೆಲೂನ್ ಎಂಬ ಸ್ವಂತ ಅಂಗಡಿ ಹೊಂದಿ ವೃತ್ತಿ ಮುಂದುವರಿಸಿಕೊಂಡು ಹೋಗುತ್ತಿದ್ದರು.

ಜೊತೆಗೆ ಉಜಿರೆ ಪೇಟೆಯಲ್ಲಿ ಆರ್ ಕೆ ಬೇಕರಿ ಕೂಡ ಹೊಂದಿದ್ದರು. ಇವರು ಉಜಿರೆ ಸುರ್ಯ ರಸ್ತೆಯಲ್ಲಿ ನೂತನ ಗೃಹ ನಿರ್ಮಿಸಿದ್ದು ತಿಂಗಳ ಹಿಂದಷ್ಟೇ ಅದ್ದೂರಿಯ ಗೃಹಪ್ರವೇಶ ಕಾರ್ಯಕ್ರಮ ನಡೆದಿತ್ತು.

ಮೃತರು ತಂದೆ, ತಾಯಿ, ಓರ್ವ ಸಹೋದರ ಕಮಲಾಕ್ಷ ಭಂಡಾರಿ, ಪತ್ನಿ ತಾರಾ, ಮಕ್ಕಳಾದ ತೇಜಶ್ವಿನಿ ಮತ್ತು ಪವನ್ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya
error: Content is protected !!