September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

ಬೆಳ್ತಂಗಡಿ; ಮೂಲತಃ ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ‌ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯ ನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾ.24 ರಂದು ನಡೆದಿದೆ.

ಉಜಿರೆಯ ಪ್ರಸಿದ್ಧ ರಾಜ್ ಹೇರ್ ಡ್ರೆಸ್ಸಸ್ ಸಂಸ್ಥೆಯ ಮಾಲಿಕರಾಗಿರುವ ದೇವರಾಜ ಭಂಡಾರಿ ಮತ್ತು ರತ್ನಾವತಿ ದಂಪತಿ ಪುತ್ರನಾಗಿರುವ ಅವರು ತಂದೆಯ ಜೊತೆಗೇ ದೀರ್ಘ ಕಾಲ ಕ್ಷೌರಿಕ ವೃತ್ತಿ ನಡೆಸುತ್ತಿದ್ದರು. ಬಳಿಕ ಇತ್ತೀಚಿನ ಕೆಲ‌ ವರ್ಷಗಳಿಂದ ಆರ್.ಕೆ ಸೆಲೂನ್ ಎಂಬ ಸ್ವಂತ ಅಂಗಡಿ ಹೊಂದಿ ವೃತ್ತಿ ಮುಂದುವರಿಸಿಕೊಂಡು ಹೋಗುತ್ತಿದ್ದರು.

ಜೊತೆಗೆ ಉಜಿರೆ ಪೇಟೆಯಲ್ಲಿ ಆರ್ ಕೆ ಬೇಕರಿ ಕೂಡ ಹೊಂದಿದ್ದರು. ಇವರು ಉಜಿರೆ ಸುರ್ಯ ರಸ್ತೆಯಲ್ಲಿ ನೂತನ ಗೃಹ ನಿರ್ಮಿಸಿದ್ದು ತಿಂಗಳ ಹಿಂದಷ್ಟೇ ಅದ್ದೂರಿಯ ಗೃಹಪ್ರವೇಶ ಕಾರ್ಯಕ್ರಮ ನಡೆದಿತ್ತು.

ಮೃತರು ತಂದೆ, ತಾಯಿ, ಓರ್ವ ಸಹೋದರ ಕಮಲಾಕ್ಷ ಭಂಡಾರಿ, ಪತ್ನಿ ತಾರಾ, ಮಕ್ಕಳಾದ ತೇಜಶ್ವಿನಿ ಮತ್ತು ಪವನ್ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya
error: Content is protected !!