July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

ಬೆಳ್ತಂಗಡಿ; ಮೂಲತಃ ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ‌ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯ ನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾ.24 ರಂದು ನಡೆದಿದೆ.

ಉಜಿರೆಯ ಪ್ರಸಿದ್ಧ ರಾಜ್ ಹೇರ್ ಡ್ರೆಸ್ಸಸ್ ಸಂಸ್ಥೆಯ ಮಾಲಿಕರಾಗಿರುವ ದೇವರಾಜ ಭಂಡಾರಿ ಮತ್ತು ರತ್ನಾವತಿ ದಂಪತಿ ಪುತ್ರನಾಗಿರುವ ಅವರು ತಂದೆಯ ಜೊತೆಗೇ ದೀರ್ಘ ಕಾಲ ಕ್ಷೌರಿಕ ವೃತ್ತಿ ನಡೆಸುತ್ತಿದ್ದರು. ಬಳಿಕ ಇತ್ತೀಚಿನ ಕೆಲ‌ ವರ್ಷಗಳಿಂದ ಆರ್.ಕೆ ಸೆಲೂನ್ ಎಂಬ ಸ್ವಂತ ಅಂಗಡಿ ಹೊಂದಿ ವೃತ್ತಿ ಮುಂದುವರಿಸಿಕೊಂಡು ಹೋಗುತ್ತಿದ್ದರು.

ಜೊತೆಗೆ ಉಜಿರೆ ಪೇಟೆಯಲ್ಲಿ ಆರ್ ಕೆ ಬೇಕರಿ ಕೂಡ ಹೊಂದಿದ್ದರು. ಇವರು ಉಜಿರೆ ಸುರ್ಯ ರಸ್ತೆಯಲ್ಲಿ ನೂತನ ಗೃಹ ನಿರ್ಮಿಸಿದ್ದು ತಿಂಗಳ ಹಿಂದಷ್ಟೇ ಅದ್ದೂರಿಯ ಗೃಹಪ್ರವೇಶ ಕಾರ್ಯಕ್ರಮ ನಡೆದಿತ್ತು.

ಮೃತರು ತಂದೆ, ತಾಯಿ, ಓರ್ವ ಸಹೋದರ ಕಮಲಾಕ್ಷ ಭಂಡಾರಿ, ಪತ್ನಿ ತಾರಾ, ಮಕ್ಕಳಾದ ತೇಜಶ್ವಿನಿ ಮತ್ತು ಪವನ್ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya
error: Content is protected !!