July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೂವರು ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಬಿ.ಎಸ್.ಅಬ್ದುಲ್ ಖಾದರ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಕಚೇರಿಗೆ ಮಾ.24 ರಂದು ಸಂಜೆ ಭೇಟಿ ಮಾಡಿ ಪ್ರಕರಣ ಬಗ್ಗೆ ಮಾಹಿತಿ ಪಡೆದುಕೊಂಡು ಹತ್ಯೆ ಯಾವ ಕಾರಣಕ್ಕೆ ಮಾಡಿದ್ದಾರೆ ಇದರ ಹಿಂದಿರುವ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಜೊತೆಗೆ ಮೂವರ ಮೃತದೇಹದ ಡಿಎನ್ಎ ಪರೀಕ್ಷೆ ಅದಷ್ಟು ಬೇಗ ಮಾಡಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲು ಮನವಿ ಮಾಡಿಕೊಂಡರು. ಈ ವೇಳೆ ಎಡಿಷನ್ ಎಸ್ಪಿ ಅಬ್ದುಲ್ ಖಾದರ್ ಅವರು ಈ ಮೂರು ಜನರ ಹತ್ಯೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಇನ್ನೂ ಎರಡು ದಿನದ ಒಳಗೆ ಪ್ರಕರಣದ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.ತುಮಕೂರು ಎಡಿಷನ್ ಎಸ್ಪಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ವೇಳೆ ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಮತ್ತು ಬೆಳ್ತಂಗಡಿ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಂ ಕೊಕ್ಕಡ ಜೊತೆಯಲ್ಲಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಬೆಳ್ತಂಗಡಿ: ಕಾಲುಬಾಯಿ ಲಸಿಕಾ ಕಾರ್ಯಕ್ರಮ ಉದ್ಘಾಟನೆ ಹಾಗೂ ತರಬೇತಿ ಶಿಬಿರ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya
error: Content is protected !!