27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಆಚರಿಸಲಾಯಿತು. ಜಯಗೋಷಗಳೊಂದಿಗೆನ ಏಸುಕ್ರಿಸ್ತರ ಜೆರುಸಲೇಮ್ ಪ್ರವೇಶವನ್ನು ಗರಿಗಳ ಹಬ್ಬವೆಂದು ಆಚರಿಸಲಾಗುತ್ತದೆ.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷರಾದ ಅತಿ ವಂದನೀಯ ಬಿಷಫ್ ಲಾರೆನ್ಸ್ ಮುಕ್ಕುಯಿಯವರು ಆಚರಣೆಗಳ ನೇತೃತ್ವ ವಹಿಸಿದ್ದರು. ವಂದನೀಯ ಫಾದರ್ ಟೋಮಿ ಮಟ್ಟಂ , ವಂದನೀಯ ಫಾದರ್ ಲಾರೆನ್ಸ್ ಫೋನೊಲಿಲ್, ವಂದನೀಯ ಫಾದರ್ ಕುರಿಯಕೋಸ್ ಧರ್ಮ ಭಗನಿಯರು ಹಾಗೂ ವಿಶ್ವಾಸಿಗಳು ಹಬ್ಬದಲ್ಲಿ ಪಾಲ್ಗೊಂಡರು.

ಕ್ರಿಸ್ತರ ಚರಿತ್ರೆ ಪ್ರವೇಶವು ಅವರ ಸಹನ ಹಾಗೂ ಶಿಲುಬೆ ಮರಣದ ಮುನ್ನುಡಿ. ಜೆರುಸಲೇಮ್ ಪ್ರವೇಶ ಕ್ರಿಸ್ತರ ಸಹನೆ, ಮರಣ ಹಾಗೂ ಉದ್ಯಾನದ ಕಡೆಗಿನ ದಾರಿಯ ಆರಂಭ. ಜಯ ಘೋಷ ಹಾಡಿದ ಅದೇ ಜನರು ಅವರನ್ನು ಕೊಲ್ಲಲು ಅಧಿಕಾರಿಗಳನ್ನು ಒತ್ತಾಯಿಸುತ್ತಾರೆ. ಅದೇ ಜನರ ಪಾಪ ಪರಿಹಾರಕ್ಕಾಗಿ ಏಸುಕ್ರಿಸ್ತರು ಶಿಲುಬೆಗೇರಿ ಮರಣ ಹೊಂದುವರು. ಇದು ಕ್ರೈಸ್ತ ಬಾಂಧವರಿಗೆ ಪವಿತ್ರ ವಾರ.

ಯೇಸು ಕ್ರಿಸ್ತರ ಜೆರುಸಲೇಮ್ ಪ್ರವೇಶದಿಂದ ಈಸ್ಟರ್ ಆದಿತ್ಯವಾರದ ತನಕಿನ ದಿನಗಳು ಕ್ಷಮೆಯ ಕರುಣೆಯ ದೇವರ ಪ್ರೀತಿಯನ್ನು ಮನುಕುಲಕ್ಕೆ ತಿಳಿಯಪಡಿಸಿದ ದಿನಗಳಾಗಿವೆ. ಯೇಸುಕ್ರಿಸ್ತರನ್ನು ಜೆರುಸಲೇಮ್ ನಗರಕ್ಕೆ ಒತ್ತುಹೊಯ್ದ , ಏಸುಕ್ರಿಸ್ತರ ಸಂದೇಶವನ್ನು ಲೋಕಕ್ಕೆ ಸಾರಲು ಈ ಹಬ್ಬವು ಕರೆ ನೀಡುತ್ತದೆ.

Related posts

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya
error: Content is protected !!