September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ತನ್ನ ಮೇಲೆ ಪುತ್ರ ಹಾಗೂ ಸೊಸೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ತಂದೆ ವೇಣೂರು ಠಾಣೆಗೆ ದೂರು ನೀಡಿದ್ದಾರೆ.

ಶಿರ್ಲಾಲು ಗ್ರಾಮದ ಸರಪ್ಪಾಡಿ ಮನೆ ನಿವಾಸಿಯಾಗಿರುವ ಸುಂದರ ಪೂಜಾರಿ(75) ಎಂಬವರೇ ದೂರು ನೀಡಿದವರಾಗಿದ್ದಾರೆ. ಸುಂದರ ಪೂಜಾರಿ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ನನ್ನ ಹೆಸರಿನಲ್ಲಿರುವ ಜಮೀನನ್ನು ತನ್ನೋಬ್ಬನ ಹೆಸರಿಗೆ ಬರೆದು ಕೊಡುವಂತೆ ಒತ್ತಾಯಿಸಿ ಪುತ್ರ ಹಾಗೂ ಸೊಸೆ ಆಗಾಗ ಜಗಳ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.ಮಾ.21ರಂದು ಸಂಜೆಯ ವೇಳೆ ಪುತ್ರ ಮನೆಯಲ್ಲಿ ಇದ್ದ ಅಡಿಕೆಯನ್ನು ತೆಗೆದುಕೊಂಡು ಹೋಗಲು ಮುಂದಾಗಿದ್ದು ಈ ವೇಳೆ ನಾನು ಪ್ರಶ್ನಿಸಿದಾಗ ಕೋಪಗೊಂಡ ಮಗ ಹಾಗೂ ಸೊಸೆ ಅಡಿಕೆ ಮರದ ಸಲಾಕೆಯಿಂದ ಹಲ್ಲೆ ನಡೆಸಿ ಕೊಲೆಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ .

ಹಲ್ಲೆಗೆ ಒಳಗಾಗಿರುವ ಸುಂದರ ಪೂಜಾರಿ ಆಸ್ಪತ್ರೆಗೆ ದಾಖಲಾಗಿದ್ದು ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Related posts

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya
error: Content is protected !!