July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

ಬೆಳ್ತಂಗಡಿ : ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ (ರಿ) ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ ಮಾ.17 ರಂದು ಮಡಂತ್ಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಕೇಂದ್ರೀಯ ಮಾಜಿ ಅಧ್ಯಕ್ಷರು ಹಾಗೂ ಅಂತರಾಷ್ಟ್ರೀಯ ಉದ್ಯಮಿ ವಾಲ್ಟರ್ ಡಿಸೋಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತಮ್ಮ ದಿಕ್ಸೂಚಿ ಭಾಷಣವನ್ನು ಮಾಡಿ ಮಾರ್ಗದರ್ಶನ ನೀಡಿದರು. 


ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ಅತೀ ವಂದನೀಯ ಸ್ವಾಮಿ ವಾಲ್ಟರ್ ಡಿಮೆಲ್ಲೋರವರು ಮಾತನಾಡಿ ಕೆಥೊಲಿಕ್ ಸಭಾದ ಬೆಳವಣಿಗೆ ಹಾಗೂ ಮುಂದಿರುವ ಯೋಜನೆಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಮಡಂತ್ಯಾರ್ ಘಟಕದ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಸ್ವಾಮಿ ಸ್ಟಾನಿ ಗೊವಿಯಸ್ ಸಂದೇಶ ನೀಡಿ ಶುಭ ಹಾರೈಸಿದರು.


ವಲಯದಿಂದ ಪದಾಧಿಕಾರಿಗಳಾಗಿ ಕೇಂದ್ರಿಯ, ಪ್ರಾಂತೀಯ ಹಾಗೂ ವಲಯದಲ್ಲಿ ಸೇವೆ ಸಲ್ಲಿಸಿದವರಿಗೆ ಹಾಗೂ ಪ್ರಸ್ತುತ ವರ್ಷದಲ್ಲಿ ವಿವಿಧ ರೀತಿಯಲ್ಲಿ ಸಾಧನೆಗೈದ ಘಟಕಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷರಾದ ಲಿಯೋ ರೋಡ್ರಿಗಸ್ ವಹಿಸಿ, ತಮ್ಮ ಅಧ್ಯಕ್ಷೀಯ ಭಾಷಣವನ್ನು ನೀಡಿದರು.


ವೇದಿಕೆಯಲ್ಲಿ ವಲಯ ಕಾರ್ಯದರ್ಶಿ ಹಾಗೂ ಮಡಂತ್ಯಾರ್ ಘಟಕದ ಅಧ್ಯಕ್ಷರಾದ ಪಿಲಿಪ್ ಡಿಕುನ್ಹ, ಘಟಕದ ಕಾರ್ಯದರ್ಶಿ ಐವನ್ ಸಿಕ್ವೇರಾ ಉಪಸ್ಥಿತರಿದ್ದರು.
ಎಡ್ವರ್ಡ್ ರೇಗೊ ಸ್ವಾಗತಿಸಿ, ಪಿಲಿಪ್ ಡಿಕುನ್ಹ ವಂದಿಸಿ, ವಾಲ್ಟರ್ ಮೋನಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya

ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

Suddi Udaya
error: Content is protected !!