July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬೆಳ್ತಂಗಡಿ ಮಂಡಲದ ಪ್ರವಾಸದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಧರ್ಮಸ್ಥಳ ಗ್ರಾಮದ ಬೂತ್ ಸಂಖ್ಯೆ 163ರ ಬೂತ್ ಅಧ್ಯಕ್ಷರಾದ ಉಮಾನಾಥ್ ಅವರ ಮನೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು, ಸುತ್ತಮುತ್ತಲಿನವರು ಮತ್ತು ಕುಟುಂಬದವರನ್ನು ಸೇರಿಸಿಕೊಂಡು ವಿಭಿನ್ನ ರೀತಿಯಲ್ಲಿ ಆಯೋಜಿಸಬೇಕೆಂಬ ಉತ್ಸಾಹದಿಂದ ಉಮಾನಾಥರು ಅಲ್ಲಿ ಹಬ್ಬದ ವಾತಾವರಣವನ್ನೇ ಸೃಷ್ಟಿ ಮಾಡಿದ್ದರು..

ನಮ್ಮ ಪಕ್ಷದ ಸಂಘಟನೆಗೆ ಬಲ ತುಂಬುವಂತಹ ಮತ್ತು ಮನೆ ಮನೆ ಭೇಟಿಯ ಮೂಲಕ ಅಸಲಿಗೆ ಚುನಾವಣೆಯನ್ನು ಎದುರಿಸಲಿರುವ ಬೂತ್ ಮಟ್ಟದ ಕಾರ್ಯಕರ್ತರಲ್ಲಿ ತುಂಬಿದ್ದ ಉತ್ಸಾಹವನ್ನು ಕಂಡು ನನ್ನ ಭವಿಷ್ಯದ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಪ್ರೇರಣೆ ನೀಡಿತು ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಜಯಂತ್ ಕೋಟ್ಯಾನ್, ಶ್ರೀನಿವಾಸ್ ರಾವ್, ಜಯಾನಂದ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ, ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
error: Content is protected !!