27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಮಾ. 25 ರಂದು ಪ್ರೋಡಕ್ಟ್ ಲಾಂಚ್ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಬಿ ಎ ಕುಮಾರ ಹೆಗ್ಡೆ ವಹಿಸಿದ್ದರು, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮೆಟ್ರೋ ಆಹಾರ ಸಂಸ್ಕರಣಾ ಉದ್ಯಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಜೂಲಿ ಜೋಸೆಫ್ ಟಿ ಇವರು ಆಗಮಿಸಿದ್ದರು.

ಕಾಲೇಜಿನ ತೃತೀಯ ಬಿಎ ವಿಭಾಗದ ರೋಷನ್ ಇವರು ರೈನ್ ಸ್ಕಿನ್ ಕೇರ್, ರೇಂಜ್ ಆಫ್ ಸ್ಕಿನ್ ಕೇರ್ ಎಂಬ ಪ್ರಾಡಕ್ಟ್ ಅನ್ನು ಆವಿಷ್ಕಾರ ಮಾಡಿ ಅದನ್ನು ಇಂದು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿ ಅದರ ಕುರಿತು ಮಾತಾಡಿದರು.

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು .

ಈ ಸಂದರ್ಭದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ನ ಸಂಯೋಜಕರು, ಸಮಾಜ ಕಾರ್ಯ ವಿಭಾಗದ ಉಪನ್ಯಾಸಕರು ಸ್ವಾತಿ ಬಿ ಹಾಗೂ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರು ಸುಮಂತ್ ಜೈನ್ ಉಪಸ್ಥಿತರಿದ್ದರು.

ಹೆನ್ರಿ ಮೇಲಿಷ ಸೇರಾವೊ ಸ್ವಾಗತಿಸಿದರು, ಜೇನೀಫರ್ ಸಲ್ದನ್ಹ ಮತ್ತು ಶಿವಾನಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya
error: Content is protected !!