25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಮಾ. 25 ರಂದು ಪ್ರೋಡಕ್ಟ್ ಲಾಂಚ್ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಬಿ ಎ ಕುಮಾರ ಹೆಗ್ಡೆ ವಹಿಸಿದ್ದರು, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮೆಟ್ರೋ ಆಹಾರ ಸಂಸ್ಕರಣಾ ಉದ್ಯಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಜೂಲಿ ಜೋಸೆಫ್ ಟಿ ಇವರು ಆಗಮಿಸಿದ್ದರು.

ಕಾಲೇಜಿನ ತೃತೀಯ ಬಿಎ ವಿಭಾಗದ ರೋಷನ್ ಇವರು ರೈನ್ ಸ್ಕಿನ್ ಕೇರ್, ರೇಂಜ್ ಆಫ್ ಸ್ಕಿನ್ ಕೇರ್ ಎಂಬ ಪ್ರಾಡಕ್ಟ್ ಅನ್ನು ಆವಿಷ್ಕಾರ ಮಾಡಿ ಅದನ್ನು ಇಂದು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿ ಅದರ ಕುರಿತು ಮಾತಾಡಿದರು.

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು .

ಈ ಸಂದರ್ಭದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ನ ಸಂಯೋಜಕರು, ಸಮಾಜ ಕಾರ್ಯ ವಿಭಾಗದ ಉಪನ್ಯಾಸಕರು ಸ್ವಾತಿ ಬಿ ಹಾಗೂ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರು ಸುಮಂತ್ ಜೈನ್ ಉಪಸ್ಥಿತರಿದ್ದರು.

ಹೆನ್ರಿ ಮೇಲಿಷ ಸೇರಾವೊ ಸ್ವಾಗತಿಸಿದರು, ಜೇನೀಫರ್ ಸಲ್ದನ್ಹ ಮತ್ತು ಶಿವಾನಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ನೆರಿಯ: ಮನೆಗೆ ಬೆಂಕಿ ತಗುಲಿ ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಧನಸಹಾಯ ಹಸ್ತಾಂತರ

Suddi Udaya

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya
error: Content is protected !!