23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಮಾ.25ರಂದು ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ಮಾತನಾಡುತ್ತಾ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಮೌಲ್ಯಮಾಪನ ಮಾಡುವಾಗ, ಅವರ ಶೈಕ್ಷಣಿಕ ಹಿನ್ನೆಲೆ ಅಥವಾ ಪದವಿಯ ಆಧಾರದ ಮೇಲೆ ಮಾತ್ರವಲ್ಲದೆ ಅವರ ಕೌಶಲ್ಯಗಳು, ಸಂವಹನ ಕಲೆ, ಪ್ರಾಮಾಣಿಕತೆ, ಸಾಮರ್ಥ್ಯಗಳು, ಅವರ ಅನುಭವ ಮತ್ತು ಶೈಕ್ಷಣಿಕ ಹಿನ್ನೆಲೆಯಂತಹ ಪ್ರತಿಭೆಯನ್ನು ಪರೀಕ್ಷಿಸಲಾಗುತ್ತದೆ. ಪ್ರಸ್ತುತ ಯುಗದಲ್ಲಿ ಜ್ಞಾನ ತಂತ್ರಜ್ಞಾನದ ಬಳಕೆ ಅನಿವಾರ್ಯ ಎಂದು ಹೇಳುತ್ತಾ ತಮ್ಮ ಬದುಕಿನ ಸಂದರ್ಶನದ ಸಂದರ್ಭದಲ್ಲಾದ ಹಲವು ಅನುಭವಾತ್ಮಕ ಘಟನೆಗಳ ಬಗ್ಗೆ ತಿಳಿಸಿ ಆತ್ಮವಿಶ್ವಾಸದಿಂದ ಸಂದರ್ಶನವನ್ನು ಎದುರಿಸಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ ಕೆ.ಎ ವಹಿಸಿ ವೃತ್ತಿ ಜೀವನದಲ್ಲಿ ಸಂದರ್ಶನಕ್ಕೆ ಪೂರಕವಾದ ಕೌಶಲಗಳನ್ನು ಅಳವಡಿಸಿಕೊಳ್ಳಿ ಎಂದು ಹೇಳಿದರು.

ಉಪನ್ಯಾಸಕರಾದ ಮಂಜು ಆರ್ ಅನುಷಾ ಡಿ.ಜೆ. ಹಾಗೂ ವರ್ಗದವರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿರಿದ್ದರು.

ಪ್ರಶಿಕ್ಷಣಾರ್ಥಿಗಳಾದ ಸುರಕ್ಷ, ಅಂಬಿಕಾ ಪ್ರಾರ್ಥಿಸಿ ನಿಶಾ ಸ್ವಾಗತಿಸಿ. ಅರ್ಚನಾ ವಂದಿಸಿ. ಯತೀಕ್ಷ ಕಾರ್ಯಕ್ರಮ ನಿರೂಪಿಸಿದರು.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya
error: Content is protected !!