April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

ಬೆಳ್ತಂಗಡಿ : ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ (ರಿ) ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ ಮಾ.17 ರಂದು ಮಡಂತ್ಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಕೇಂದ್ರೀಯ ಮಾಜಿ ಅಧ್ಯಕ್ಷರು ಹಾಗೂ ಅಂತರಾಷ್ಟ್ರೀಯ ಉದ್ಯಮಿ ವಾಲ್ಟರ್ ಡಿಸೋಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತಮ್ಮ ದಿಕ್ಸೂಚಿ ಭಾಷಣವನ್ನು ಮಾಡಿ ಮಾರ್ಗದರ್ಶನ ನೀಡಿದರು. 


ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ಅತೀ ವಂದನೀಯ ಸ್ವಾಮಿ ವಾಲ್ಟರ್ ಡಿಮೆಲ್ಲೋರವರು ಮಾತನಾಡಿ ಕೆಥೊಲಿಕ್ ಸಭಾದ ಬೆಳವಣಿಗೆ ಹಾಗೂ ಮುಂದಿರುವ ಯೋಜನೆಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಮಡಂತ್ಯಾರ್ ಘಟಕದ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಸ್ವಾಮಿ ಸ್ಟಾನಿ ಗೊವಿಯಸ್ ಸಂದೇಶ ನೀಡಿ ಶುಭ ಹಾರೈಸಿದರು.


ವಲಯದಿಂದ ಪದಾಧಿಕಾರಿಗಳಾಗಿ ಕೇಂದ್ರಿಯ, ಪ್ರಾಂತೀಯ ಹಾಗೂ ವಲಯದಲ್ಲಿ ಸೇವೆ ಸಲ್ಲಿಸಿದವರಿಗೆ ಹಾಗೂ ಪ್ರಸ್ತುತ ವರ್ಷದಲ್ಲಿ ವಿವಿಧ ರೀತಿಯಲ್ಲಿ ಸಾಧನೆಗೈದ ಘಟಕಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷರಾದ ಲಿಯೋ ರೋಡ್ರಿಗಸ್ ವಹಿಸಿ, ತಮ್ಮ ಅಧ್ಯಕ್ಷೀಯ ಭಾಷಣವನ್ನು ನೀಡಿದರು.


ವೇದಿಕೆಯಲ್ಲಿ ವಲಯ ಕಾರ್ಯದರ್ಶಿ ಹಾಗೂ ಮಡಂತ್ಯಾರ್ ಘಟಕದ ಅಧ್ಯಕ್ಷರಾದ ಪಿಲಿಪ್ ಡಿಕುನ್ಹ, ಘಟಕದ ಕಾರ್ಯದರ್ಶಿ ಐವನ್ ಸಿಕ್ವೇರಾ ಉಪಸ್ಥಿತರಿದ್ದರು.
ಎಡ್ವರ್ಡ್ ರೇಗೊ ಸ್ವಾಗತಿಸಿ, ಪಿಲಿಪ್ ಡಿಕುನ್ಹ ವಂದಿಸಿ, ವಾಲ್ಟರ್ ಮೋನಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya
error: Content is protected !!