25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

ಬೆಳ್ತಂಗಡಿ : ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ (ರಿ) ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ ಮಾ.17 ರಂದು ಮಡಂತ್ಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಕೇಂದ್ರೀಯ ಮಾಜಿ ಅಧ್ಯಕ್ಷರು ಹಾಗೂ ಅಂತರಾಷ್ಟ್ರೀಯ ಉದ್ಯಮಿ ವಾಲ್ಟರ್ ಡಿಸೋಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತಮ್ಮ ದಿಕ್ಸೂಚಿ ಭಾಷಣವನ್ನು ಮಾಡಿ ಮಾರ್ಗದರ್ಶನ ನೀಡಿದರು. 


ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ಅತೀ ವಂದನೀಯ ಸ್ವಾಮಿ ವಾಲ್ಟರ್ ಡಿಮೆಲ್ಲೋರವರು ಮಾತನಾಡಿ ಕೆಥೊಲಿಕ್ ಸಭಾದ ಬೆಳವಣಿಗೆ ಹಾಗೂ ಮುಂದಿರುವ ಯೋಜನೆಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಮಡಂತ್ಯಾರ್ ಘಟಕದ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಸ್ವಾಮಿ ಸ್ಟಾನಿ ಗೊವಿಯಸ್ ಸಂದೇಶ ನೀಡಿ ಶುಭ ಹಾರೈಸಿದರು.


ವಲಯದಿಂದ ಪದಾಧಿಕಾರಿಗಳಾಗಿ ಕೇಂದ್ರಿಯ, ಪ್ರಾಂತೀಯ ಹಾಗೂ ವಲಯದಲ್ಲಿ ಸೇವೆ ಸಲ್ಲಿಸಿದವರಿಗೆ ಹಾಗೂ ಪ್ರಸ್ತುತ ವರ್ಷದಲ್ಲಿ ವಿವಿಧ ರೀತಿಯಲ್ಲಿ ಸಾಧನೆಗೈದ ಘಟಕಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷರಾದ ಲಿಯೋ ರೋಡ್ರಿಗಸ್ ವಹಿಸಿ, ತಮ್ಮ ಅಧ್ಯಕ್ಷೀಯ ಭಾಷಣವನ್ನು ನೀಡಿದರು.


ವೇದಿಕೆಯಲ್ಲಿ ವಲಯ ಕಾರ್ಯದರ್ಶಿ ಹಾಗೂ ಮಡಂತ್ಯಾರ್ ಘಟಕದ ಅಧ್ಯಕ್ಷರಾದ ಪಿಲಿಪ್ ಡಿಕುನ್ಹ, ಘಟಕದ ಕಾರ್ಯದರ್ಶಿ ಐವನ್ ಸಿಕ್ವೇರಾ ಉಪಸ್ಥಿತರಿದ್ದರು.
ಎಡ್ವರ್ಡ್ ರೇಗೊ ಸ್ವಾಗತಿಸಿ, ಪಿಲಿಪ್ ಡಿಕುನ್ಹ ವಂದಿಸಿ, ವಾಲ್ಟರ್ ಮೋನಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya
error: Content is protected !!