25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

ವೇಣೂರು: ಕೊಕ್ರಾಡಿಯ ಹೇರ್ದಂಡಿ ಬ್ಯಾಕ್ಯಾರುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೈವಸ್ಥಾನದಲ್ಲಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವವು ಮಾ. 26ರಿಂದ 29ವರೆಗೆ ಜರಗಲಿದ್ದು, ಈ ಬಗ್ಗೆ ಸಮಿತಿ ಪದಾಧಿಕಾರಿಗಳ ಪೂರ್ವಭಾವಿ ಸಭೆ ಜರಗಿತು.

ಸಭೆಯಲ್ಲಿ ವೇದಿಕೆ, ಆಸನ, ಅಲಂಕಾರ, ಊಟೋಪಚಾರದ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು.

ಲೋಕಸಭಾ ಚುನಾವಣೆಯ ಸಂಬಂಧ ಚುನಾವಣಾ ನೀತಿ ಸಂಹಿತೆ ಪಾಲಿಸಿ ಕಾರ್ಯಕ್ರಮ ನಿರ್ವಹಣೆ ಮಾಡುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಡಂಗೆಗುತ್ತು ಕೊಕ್ರಾಡಿ, ಪ್ರ. ಕಾರ್ಯದರ್ಶಿ ಅಜಿತ್ ಕುಮಾರ್ ಹಿರ್ತೊಟ್ಟುಗುತ್ತು ಕೊಕ್ರಾಡಿ, ಕೋಶಾಧಿಕಾರಿ ಸೂರ್ಯನಾರಾಯಣ ಡಿ.ಕೆ., ನ್ಯಾಯವಾದಿ ನವೀನ್ ಶೆಟ್ಟಿ, ರವಿ ಪೂಜಾರಿ ಮಾನ್ಯೋಡಿಗುತ್ತು, ಲಕ್ಷ್ಮಣ ಪೂಜಾರಿ, ಶಿವಪ್ರಕಾಶ್ ಅಂಭಾಶ್ರೀ, ದಯಾನಂದ ಕುಲಾಲ್, ಹರೀಶ್ ಕುಮಾರ್ ಕೊಕ್ರಾಡಿ, ಕೃಷ್ಣಪ್ಪ ಪೂಜಾರಿ ಸಾವ್ಯ, ಹರೀಶ್ ಪೂಜಾರಿ ಬಳ್ಳಿದಡ್ಡ, ವಿಶ್ವನಾಥ ಬಂಗ ಮತ್ತಿತರರು ಇದ್ದರು.

Related posts

ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ : ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ಸೇರಿದಂತೆ ಹಲವು ಪ್ರಶಸ್ತಿ

Suddi Udaya

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!