September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ ಜೆಸಿಐ ಭವನದಲ್ಲಿ ನಡೆದ (EPS) effective Public speaking ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ಮಾತೃಶ್ರೀ ಟೆಕ್ಸ್ ಟೈಲ್ಸ್ ನ ಮಾಲಕರಾಗಿರುವ ಮೋಹನ್ ಸುವರ್ಣ ಉದ್ಘಾಟಿಸಿ ಶುಭಕೋರಿದರು.

ಜೆಸಿಐ ಬೆಳ್ತಂಗಡಿಯ ಅಧ್ಯಕ್ಷ ಹಾಗೂ ಜೆಸಿಐ ಭಾರತದ ವಲಯ ತರಬೇತುದಾರಾದ ರಂಜಿತ್ ಎಚ್ ಡಿ ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷರಾಗಿರುವ ಪ್ರೀತಮ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾದ ಜೆಸಿ ಶಂಕರ್ ರಾವ್ ಅತಿಥಿಯಾಗಿ ಭಾಗವಹಿಸಿದರು.

ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಹಿಳಾ ಘಟಕದ ಸಂಯೋಜಕರಾದ ಶೃತಿ ರಂಜಿತ್, ಜೆಜೆಸಿ ಅಧ್ಯಕ್ಷರಾದ ಸಮನ್ವತ್ ಕುಮಾರ್, ಕಾರ್ಯಕ್ರಮದ ಸಂಯೋಜಕರಾದ ಜೆಸಿ ರಕ್ಷಿತಾ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದ ಸಲ್ಲಿಸಿದರು. ವೇದಿಕೆ ಆಹ್ವಾನವನ್ನು ಪೂರ್ವ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ, ಜೆಸಿ ವಾಣಿಯನ್ನು ಶಿವಾನಿ ಉದ್ಘೋಷಿಸಿದರು, ಉದ್ಘಾಟಕರ ಪರಿಚಯವನ್ನು ನಮ್ರತಾ, ತರಬೇತುದಾರರ ಪರಿಚಯವನ್ನು ಮಧುಶ್ರೀ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ನಮ್ಮ ಘಟಕದ ಪೂರ್ವಧ್ಯಕ್ಷರುಗಳಾದ ಜೆಸಿ ತುಕಾರಾಮ್, ನಾರಾಯಣ ಶೆಟ್ಟಿ, ಚಿದಾನಂದ ಇಡ್ಯಾ, ಸಂತೋಷ ಪಿ ಕೋಟ್ಯಾನ್ ಬಳಂಜ, ಪ್ರಸಾದ್ ಬಿ ಎಸ್, ಉಪಾಧ್ಯಕ್ಷರಾದ ಶೈಲೇಶ್, ಸದಸ್ಯರಾದ ಜಿತೇಶ್, ರತ್ನಾಕರ ಹಾಗೂ ಜೆಜೆಸಿ ಸದಸ್ಯರು ಭಾಗವಹಿಸಿದರು.

Related posts

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ದಿ| ಕಾಶಿ ಶೆಟ್ಟಿ ಸ್ಮರಣಾರ್ಥ ದೇವನಾರಿ ಬಂಗಾಡಿ ಸ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ ವಿತರಣೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮೂರು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Suddi Udaya
error: Content is protected !!