25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

ಬೆಳ್ತಂಗಡಿ: ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಅವರು ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ಮೂವರು ವ್ಯಕ್ತಿಗಳ ಮನೆಗಳಿಗೆ ಮಾ.25ರಂದು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಅವರು ಮದ್ದಡ್ಕದ ಇಸಾಕ್ ಮನೆಗೆ, ಶಿರ್ಲಾಲಿನ ಇಮ್ಮಿಯಾಜ್ ಯಾನೆ ಸಿದ್ದಿಕ್ ಮನೆಗೆ, ಉಜಿರೆಯ ಸಾಹುಲ್ ಹಮೀದ್ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರುಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಯು.ಟಿ ಖಾದರ್ ಇದೊಂದು ಅತ್ಯಂತ ಹೇಯ ಕೃತ್ಯವಾಗಿದೆ. ಈಗಾಗಲೇ ಗೃಹ ಸಚಿವರೊಂದಿಗೆ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಮೃತದೇಹಗಳ ಡಿ.ಎನ್.ಎ ಪರೀಕ್ಷೆ ನಡೆಸಿ ಸಾಧ್ಯವಾದಷ್ಟು ವೇಗವಾಗಿ ಕುಟುಂಬಸ್ಥರಿಗೆ ಹಸ್ತಾಂತರಿಸಲು ಕೋರಿದ್ದೇನೆ ಪೊಲೀಸರು ಕಾನೂನು ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಂಡು ಬಳಿಕ ಮೃತದೇಹಗಳನ್ನು ಹಸ್ತಾಂತರಿಸಲಿದ್ದಾರೆ.

ಇದೊಂದು ದೊಡ್ಡ ಮೋಸದ ಜಾಲವಾಗಿದ್ದು ಇದರ ಹಿಂದಿರುವವರ ಬಗ್ಗೆ ಸಮಗ್ರವಾದ ತನಿಖೆಯಾಗಿ ಎಲ್ಲರನ್ನೂ ಕಾನೂನಿನ ಮುಂದೆ ತರುವ ಕಾರ್ಯ ಮಾಡಬೇಕಾಗಿದೆ. ಈಗಾಗಲೇ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಎಲ್ಲ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಇನ್ನು ಯಾರೂ ಇಂತಹ ಜಾಲಕ್ಕೆ ಬಲಿಯಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಜಿ ಜಿಲ್ಲಾ ಪಂಚಾಯತು ಸದಸ್ಯರುಗಳಾದ ಸಾಹುಲ್ ಹಮೀದ್, ಧರಣೇಂದ್ರ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹಾಗೂ ಇತರ ಮುಖಂಡರುಗಳು ಉಪಸ್ಥಿತರಿದ್ದರು..

Related posts

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya
error: Content is protected !!