July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

ಬೆಳ್ತಂಗಡಿ: ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಅವರು ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ಮೂವರು ವ್ಯಕ್ತಿಗಳ ಮನೆಗಳಿಗೆ ಮಾ.25ರಂದು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಅವರು ಮದ್ದಡ್ಕದ ಇಸಾಕ್ ಮನೆಗೆ, ಶಿರ್ಲಾಲಿನ ಇಮ್ಮಿಯಾಜ್ ಯಾನೆ ಸಿದ್ದಿಕ್ ಮನೆಗೆ, ಉಜಿರೆಯ ಸಾಹುಲ್ ಹಮೀದ್ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರುಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಯು.ಟಿ ಖಾದರ್ ಇದೊಂದು ಅತ್ಯಂತ ಹೇಯ ಕೃತ್ಯವಾಗಿದೆ. ಈಗಾಗಲೇ ಗೃಹ ಸಚಿವರೊಂದಿಗೆ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಮೃತದೇಹಗಳ ಡಿ.ಎನ್.ಎ ಪರೀಕ್ಷೆ ನಡೆಸಿ ಸಾಧ್ಯವಾದಷ್ಟು ವೇಗವಾಗಿ ಕುಟುಂಬಸ್ಥರಿಗೆ ಹಸ್ತಾಂತರಿಸಲು ಕೋರಿದ್ದೇನೆ ಪೊಲೀಸರು ಕಾನೂನು ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಂಡು ಬಳಿಕ ಮೃತದೇಹಗಳನ್ನು ಹಸ್ತಾಂತರಿಸಲಿದ್ದಾರೆ.

ಇದೊಂದು ದೊಡ್ಡ ಮೋಸದ ಜಾಲವಾಗಿದ್ದು ಇದರ ಹಿಂದಿರುವವರ ಬಗ್ಗೆ ಸಮಗ್ರವಾದ ತನಿಖೆಯಾಗಿ ಎಲ್ಲರನ್ನೂ ಕಾನೂನಿನ ಮುಂದೆ ತರುವ ಕಾರ್ಯ ಮಾಡಬೇಕಾಗಿದೆ. ಈಗಾಗಲೇ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಎಲ್ಲ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಇನ್ನು ಯಾರೂ ಇಂತಹ ಜಾಲಕ್ಕೆ ಬಲಿಯಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಜಿ ಜಿಲ್ಲಾ ಪಂಚಾಯತು ಸದಸ್ಯರುಗಳಾದ ಸಾಹುಲ್ ಹಮೀದ್, ಧರಣೇಂದ್ರ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹಾಗೂ ಇತರ ಮುಖಂಡರುಗಳು ಉಪಸ್ಥಿತರಿದ್ದರು..

Related posts

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya
error: Content is protected !!