38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಪುಂಜಾಲಕಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ.25 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿ, ಮಡಂತ್ಯಾರು ಗ್ರಾಮ ಪಂಚಾಯತ್, ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗ, ಮತದಾರ ಸಾಕ್ಷರತಾ ಸಂಘ, ಮಾನವಿಕ ಸಂಘ ಇದರ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಮಾಧವ ಎಂ. ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಜಾಗೃತಿ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್, ತಾಲೂಕು ಮಟ್ಟದ ಸ್ವೀಪ್ ತರಬೇತುದಾರ ರವಿಕುಮಾರ್ ಬಿ.ಆರ್., ಮಡಂತ್ಯಾರು ಗ್ರಾ.ಪಂ ಕಾರ್ಯದರ್ಶಿ ಮೊರ್ಲಿನ್ ಕ್ರಿಸ್ತೀನ್ ಡಿ.ಸೋಜಾ, ತಾಲೂಕು ನರೇಗಾ ಐಇಸಿ ಸಂಯೋಜಕರು ವಿನಿಷ ಹಾಗೂ ಕಾಲೇಜಿನ ಇ.ಎಲ್.ಸಿ ಸಂಚಾಲಕರಾದ ಶೇಖರ್ ಮತ್ತು ಸಹ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಭುತ್ವದ ಈ ಚುನಾವಣಾ ಹಬ್ಬದಲ್ಲಿ ಯುವ ಮತ್ತು ಭವಿಷ್ಯದ ಮತದಾರರ ಮಹತ್ವ ಹಾಗೂ ತಾಲೂಕು ಮತ್ತು ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್ ವಿದ್ಯಾರ್ಥಿಗಳೊಂದಿಗೆ ಸಂವಾದಿಸಿ ಎಲ್ಲರ ಸಹಕಾರ ಕೋರಿದರು.

Related posts

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya
error: Content is protected !!