23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಪುಂಜಾಲಕಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ.25 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿ, ಮಡಂತ್ಯಾರು ಗ್ರಾಮ ಪಂಚಾಯತ್, ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗ, ಮತದಾರ ಸಾಕ್ಷರತಾ ಸಂಘ, ಮಾನವಿಕ ಸಂಘ ಇದರ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಮಾಧವ ಎಂ. ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಜಾಗೃತಿ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್, ತಾಲೂಕು ಮಟ್ಟದ ಸ್ವೀಪ್ ತರಬೇತುದಾರ ರವಿಕುಮಾರ್ ಬಿ.ಆರ್., ಮಡಂತ್ಯಾರು ಗ್ರಾ.ಪಂ ಕಾರ್ಯದರ್ಶಿ ಮೊರ್ಲಿನ್ ಕ್ರಿಸ್ತೀನ್ ಡಿ.ಸೋಜಾ, ತಾಲೂಕು ನರೇಗಾ ಐಇಸಿ ಸಂಯೋಜಕರು ವಿನಿಷ ಹಾಗೂ ಕಾಲೇಜಿನ ಇ.ಎಲ್.ಸಿ ಸಂಚಾಲಕರಾದ ಶೇಖರ್ ಮತ್ತು ಸಹ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಭುತ್ವದ ಈ ಚುನಾವಣಾ ಹಬ್ಬದಲ್ಲಿ ಯುವ ಮತ್ತು ಭವಿಷ್ಯದ ಮತದಾರರ ಮಹತ್ವ ಹಾಗೂ ತಾಲೂಕು ಮತ್ತು ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್ ವಿದ್ಯಾರ್ಥಿಗಳೊಂದಿಗೆ ಸಂವಾದಿಸಿ ಎಲ್ಲರ ಸಹಕಾರ ಕೋರಿದರು.

Related posts

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಗೆ ರೂ. 25 ಲಕ್ಷ ಅನುದಾನ ಮಂಜೂರು: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya
error: Content is protected !!