30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

ಶಿಶಿಲ: ಇಲ್ಲಿಯ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಕೃಷ್ಣಪ್ರಸಾದ ಉಡುಪರ ನೇತೃತ್ವದಲ್ಲಿ ಮಾ.24ರಂದು ನಡೆಯಿತು.

ಪ್ರಾತ: ಕಾಲ ಸ್ವಸ್ತಿ ಪುಣ್ಯಾಹವಾಚನ, ಬೆಳಗ್ಗೆ ಗಣಹೋಮ, ಅಷ್ಟೋತ್ತರ ಶತಕಲಶ ಪೂಜೆ, ಊರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಚಾಮುಂಡೇಶ್ವರಿಗೆ “ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ಶ್ರೀನಿವಾಸ್ ಮುಡೆತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಬ್ರಹ್ಮಣ್ಯ ನೆಲ್ಲಿತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಮಂಡೆಕರ, ಉಪಾಧ್ಯಕ್ಷ ಹರೀಶ್ ಗೌಡ ಹೊಳೆಗಂಡಿ, ಪ್ರಧಾನ ಕಾರ್ಯದರ್ಶಿ ಧರ್ಮಪಾಲಗೌಡ, ಕಾರ್ಯದರ್ಶಿ ಪುನೀತ್ ಗೌಡ, ಕೋಶಾಧಿಕಾರಿ ಮಾಧವ ಪೂಜಾರಿ ದೇನೋಡಿ, ಸದಸ್ಯ ಕುಶಾಲಪ್ಪ ಗೌಡ ಜಿ. ಬದ್ರಿಜಾಲು ಹಾಗೂ ಆಡಳಿತ ಸಮಿತಿಯ ಸದಸ್ಯರು, ಸಲಹೆಗಾರರು, ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya
error: Content is protected !!