25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

ಶಿಶಿಲ: ಇಲ್ಲಿಯ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಕೃಷ್ಣಪ್ರಸಾದ ಉಡುಪರ ನೇತೃತ್ವದಲ್ಲಿ ಮಾ.24ರಂದು ನಡೆಯಿತು.

ಪ್ರಾತ: ಕಾಲ ಸ್ವಸ್ತಿ ಪುಣ್ಯಾಹವಾಚನ, ಬೆಳಗ್ಗೆ ಗಣಹೋಮ, ಅಷ್ಟೋತ್ತರ ಶತಕಲಶ ಪೂಜೆ, ಊರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಚಾಮುಂಡೇಶ್ವರಿಗೆ “ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ಶ್ರೀನಿವಾಸ್ ಮುಡೆತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಬ್ರಹ್ಮಣ್ಯ ನೆಲ್ಲಿತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಮಂಡೆಕರ, ಉಪಾಧ್ಯಕ್ಷ ಹರೀಶ್ ಗೌಡ ಹೊಳೆಗಂಡಿ, ಪ್ರಧಾನ ಕಾರ್ಯದರ್ಶಿ ಧರ್ಮಪಾಲಗೌಡ, ಕಾರ್ಯದರ್ಶಿ ಪುನೀತ್ ಗೌಡ, ಕೋಶಾಧಿಕಾರಿ ಮಾಧವ ಪೂಜಾರಿ ದೇನೋಡಿ, ಸದಸ್ಯ ಕುಶಾಲಪ್ಪ ಗೌಡ ಜಿ. ಬದ್ರಿಜಾಲು ಹಾಗೂ ಆಡಳಿತ ಸಮಿತಿಯ ಸದಸ್ಯರು, ಸಲಹೆಗಾರರು, ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya
error: Content is protected !!