July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಮಾ.25ರಂದು ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ಮಾತನಾಡುತ್ತಾ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಮೌಲ್ಯಮಾಪನ ಮಾಡುವಾಗ, ಅವರ ಶೈಕ್ಷಣಿಕ ಹಿನ್ನೆಲೆ ಅಥವಾ ಪದವಿಯ ಆಧಾರದ ಮೇಲೆ ಮಾತ್ರವಲ್ಲದೆ ಅವರ ಕೌಶಲ್ಯಗಳು, ಸಂವಹನ ಕಲೆ, ಪ್ರಾಮಾಣಿಕತೆ, ಸಾಮರ್ಥ್ಯಗಳು, ಅವರ ಅನುಭವ ಮತ್ತು ಶೈಕ್ಷಣಿಕ ಹಿನ್ನೆಲೆಯಂತಹ ಪ್ರತಿಭೆಯನ್ನು ಪರೀಕ್ಷಿಸಲಾಗುತ್ತದೆ. ಪ್ರಸ್ತುತ ಯುಗದಲ್ಲಿ ಜ್ಞಾನ ತಂತ್ರಜ್ಞಾನದ ಬಳಕೆ ಅನಿವಾರ್ಯ ಎಂದು ಹೇಳುತ್ತಾ ತಮ್ಮ ಬದುಕಿನ ಸಂದರ್ಶನದ ಸಂದರ್ಭದಲ್ಲಾದ ಹಲವು ಅನುಭವಾತ್ಮಕ ಘಟನೆಗಳ ಬಗ್ಗೆ ತಿಳಿಸಿ ಆತ್ಮವಿಶ್ವಾಸದಿಂದ ಸಂದರ್ಶನವನ್ನು ಎದುರಿಸಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ ಕೆ.ಎ ವಹಿಸಿ ವೃತ್ತಿ ಜೀವನದಲ್ಲಿ ಸಂದರ್ಶನಕ್ಕೆ ಪೂರಕವಾದ ಕೌಶಲಗಳನ್ನು ಅಳವಡಿಸಿಕೊಳ್ಳಿ ಎಂದು ಹೇಳಿದರು.

ಉಪನ್ಯಾಸಕರಾದ ಮಂಜು ಆರ್ ಅನುಷಾ ಡಿ.ಜೆ. ಹಾಗೂ ವರ್ಗದವರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿರಿದ್ದರು.

ಪ್ರಶಿಕ್ಷಣಾರ್ಥಿಗಳಾದ ಸುರಕ್ಷ, ಅಂಬಿಕಾ ಪ್ರಾರ್ಥಿಸಿ ನಿಶಾ ಸ್ವಾಗತಿಸಿ. ಅರ್ಚನಾ ವಂದಿಸಿ. ಯತೀಕ್ಷ ಕಾರ್ಯಕ್ರಮ ನಿರೂಪಿಸಿದರು.

Related posts

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya
error: Content is protected !!